ADVERTISEMENT

ಫಸಲ್ ಬಿಮಾ ಯೋಜನೆ: ಮಾಹಿತಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 8 ಜುಲೈ 2021, 11:53 IST
Last Updated 8 ಜುಲೈ 2021, 11:53 IST
ಕವಿತಾಳ ಸಮೀಪದ ಹಾಲಾಪುರದಲ್ಲಿ ಫಸಲ್‍ ಬಿಮಾ ಯೋಜನೆ ಕುರಿತು ರೈತರಿಗೆ ಬುಧವಾರ ಮಾಹಿತಿ ನೀಡಲಾಯಿತು
ಕವಿತಾಳ ಸಮೀಪದ ಹಾಲಾಪುರದಲ್ಲಿ ಫಸಲ್‍ ಬಿಮಾ ಯೋಜನೆ ಕುರಿತು ರೈತರಿಗೆ ಬುಧವಾರ ಮಾಹಿತಿ ನೀಡಲಾಯಿತು   

ಹಾಲಾಪುರ (ಕವಿತಾಳ): ‘ಮುಂಗಾರು ಹಂಗಾಮಿನಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು ಅರ್ಹ ರೈತರು ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು’ ಎಂದು ಸಹಾಯಕ ಕೃಷಿ ಅಧಿಕಾರಿ ಸದ್ದಾಂ ಹುಸೇನ್‍ ಹೇಳಿದರು.

ಮಸ್ಕಿ ತಾಲ್ಲೂಕಿನ ಹಾಲಾಪುರದ ರೈತ ಸಂಪರ್ಕ ಕೇಂದ್ರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರೈತರಿಗೆ ಮಾಹಿತಿ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಯೂರಿಯಾ ಗೊಬ್ಬರದ ಅತಿಯಾದ ಬಳಕೆಯಿಂದ ಮಣ್ಣಿನಲ್ಲಿನ ಸೂಕ್ಷ್ಮಾಣು ಜೀವಿಗಳ ಪ್ರಮಾಣ ಹಾಗೂ ಭೂಮಿಯ ಫಲವತ್ತತೆ ಕಡಿಮೆಯಾಗುತ್ತದೆ. ದೀರ್ಘ ಕಾಲದಲ್ಲಿ ಭೂಮಿ ಬರಡಾಗುತ್ತದೆ. ಹೀಗಾಗಿ ಬೇವು ಲೇಪಿತ ಯೂರಿಯಾ ಬಳಕೆಯನ್ನು ಕಡಿಮೆ ಪ್ರಮಾಣದಲ್ಲಿ ಮಾಡುವ ಮೂಲಕ ಭೂಮಿಯನ್ನು ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

‘ಫಸಲ್‍ ಬಿಮಾ ಯೋಜನೆಯಡಿ ಬೇರೆ ಬೇರೆ ಬೆಳೆಗಳಿಗೆ ಪ್ರತ್ಯೇಕ ಅರ್ಜಿ ಸಲ್ಲಿಸಬೇಕು. ರೈತರು ಸ್ವಯಂ ಆಗಿ ಬೆಳೆ ಸಮೀಕ್ಷೆ ಮಾಹಿತಿ ಸಲ್ಲಿಸಬೇಕು’ ಎಂದರು.

ADVERTISEMENT

ವೆಂಕೋಬ ನಾಯಕ, ದೇವಣ್ಣ, ಮುದುಕಣ್ಣ, ಮಲ್ಲಯ್ಯ ಗೋರ್ಕಲ್‍, ಹನುಮಂತ ನಾಯಕ, ಭೀಮಣ್ಣ ಮಿಲ್ಟ್ರಿ, ಅಮರಯ್ಯಸ್ವಾಮಿ ಮತ್ತು ರಾಮಪ್ಪ ಫರಂಗಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.