ಹಟ್ಟಿ ಚಿನ್ನದ ಗಣಿ: ಕಸಾಯಿಖಾನೆಗೆ ಸಾಗಿಸುತ್ತಿದ್ದ ಎತ್ತುಗಳನ್ನು ಸ್ಧಳೀಯ ಹಟ್ಟಿ ಠಾಣೆಯ ಪೊಲೀಸರು ಬುಧವಾರ ರಾತ್ರಿ ರಕ್ಷಿಸಿದ್ದಾರೆ.
ಗುರುಗುಂಟಾ ಗ್ರಾಮದಿಂದ ಹಟ್ಟಿ ಪಟ್ಟಣಕ್ಕೆ ಎತ್ತುಗಳನ್ನು ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ತರಲಾಗಿತ್ತು. ಖಚಿತ ಮಾಹಿತಿ ಪಡೆದ ಹಟ್ಟಿ ಠಾಣೆಯ ಪಿಐ ಹೊಸಕೇರಪ್ಪ ದಾಳಿ ನಡೆಸಿದ್ದು, ಈ ವೇಳೆ ವಾಹನ ಚಾಲಕ ಅಬ್ದುಲ್ ಇತರರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಎತ್ತುಗಳನ್ನು ರಕ್ಷಿಸಿ ಜಪ್ತಿ ಮಾಡಲಾಗಿದೆ. ಈ ಕುರಿತು ಹಟ್ಟಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.