ADVERTISEMENT

20 ರಿಂದ ಸಚಿವ ಡಿ.ಕೆ.ಶಿವಕುಮಾರ್‌ ಗೃಹಕಚೇರಿ ಎದುರು ಧರಣಿ

​ಪ್ರಜಾವಾಣಿ ವಾರ್ತೆ
Published 3 ಜೂನ್ 2019, 14:34 IST
Last Updated 3 ಜೂನ್ 2019, 14:34 IST
ಆರ್.ಮಾನಸಯ್ಯ
ಆರ್.ಮಾನಸಯ್ಯ   

ರಾಯಚೂರು: ತುಂಗಭದ್ರಾ ಎಡದಂಡೆ ಕಾಲುವೆ ಹಂಗಾಮಿ ಕಾರ್ಮಿಕರಿಗೆ 14 ತಿಂಗಳುಗಳ ಬಾಕಿ ವೇತನ ಪಾವತಿಸುವಂತೆ ಒತ್ತಾಯಿಸಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಅವರ ಬೆಂಗಳೂರಿನ ಗೃಹಕಚೇರಿ ಎದುರು ಜೂನ್‌ 20 ರಿಂದ ಧರಣಿ ಆರಂಭಿಸಲಾಗುವುದು ಎಂದು ಕಾರ್ಮಿಕರ ಸಂಘದ ಅಧ್ಯಕ್ಷ ಆರ್‌. ಮಾನಸಯ್ಯ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗುತ್ತಿಗೆ ಕಾರ್ಮಿಕ ಪದ್ಧತಿ ರದ್ದುಗೊಳಿಸಬೇಕು ಮತ್ತು ಬಾಕಿ ವೇತನ ಪಾವತಿಸಲು ಒತ್ತಾಯಿಸಿ ಕಳೆದ ವರ್ಷ 72 ದಿನಗಳ ಐತಿಹಾಸಿಕ ಹೋರಾಟ ನಡೆಸಲಾಗಿತ್ತು. ಅಂದು ಸಚಿವರು, ಕಾರ್ಮಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ಕೊಟ್ಟು ಧರಣಿ ಹಿಂಪಡೆಯಲು ಮನವೊಲಿಸಿದ್ದರು. ಇವರೆಗೂ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT