ADVERTISEMENT

ಅಂಬೇಡ್ಕರ್‌ ಭಾವಚಿತ್ರ ತೆರವು ಪ್ರಕರಣ: ಪೊಲೀಸರಿಂದ ದೂರು ಸ್ವೀಕೃತಿ

​ಪ್ರಜಾವಾಣಿ ವಾರ್ತೆ
Published 27 ಜನವರಿ 2022, 15:25 IST
Last Updated 27 ಜನವರಿ 2022, 15:25 IST
ರಾಯಚೂರಿನಲ್ಲಿ ಪ್ರತಿಭಟನೆ
ರಾಯಚೂರಿನಲ್ಲಿ ಪ್ರತಿಭಟನೆ   

ರಾಯಚೂರು: ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಗುರುವಾರ ರಾತ್ರಿ ಸಲ್ಲಿಸಿದ ದೂರು ಸದರ್‌ ಬಜಾರ್‌ ಪೊಲೀಸ್‌ ಠಾಣೆಯಲ್ಲಿ ಸ್ವೀಕೃತವಾಗಿದ್ದು, ಪ್ರತಿಭಟನೆಯನ್ನು ತಾತ್ಕಾಲಿಕ ಹಿಂಪಡೆದುಕೊಳ್ಳಲಾಗಿದೆ.

ಗಣರಾಜ್ಯೋತ್ಸವ ಸಮಾರಂಭದಲ್ಲಿ ಅಂಬೇಡ್ಕರ್‌ ಅವರ ಭಾವಚಿತ್ರ ತೆರವುಗೊಳಿಸಿದ ಘಟನೆಗೆ ಸಂಬಂಧಿಸಿದಂತೆ ನ್ಯಾಯಾಧೀಶರ ವಿರುದ್ಧ ಎಫ್‌ಐಆರ್‌ ದಾಖಲಿಸಿ ಬಂಧಿಸುವಂತೆ ದೂರಿನಲ್ಲಿ ತಿಳಿಸಲಾಗಿದೆ.

’ಪ್ರತಿಭಟನಾಕಾರರು ನೀಡಿದ್ದ ದೂರನ್ನು ಸ್ವೀಕರಿಸಲಾಗಿದ್ದು, ಅದಕ್ಕೆ ಸ್ವೀಕೃತಿಯನ್ನು ನೀಡಲಾಗಿದೆ‘ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.