ಮಂತ್ರಾಲಯ (ರಾಯಚೂರು): ಮಂತ್ರಾಲಯದಲ್ಲಿ ಗುರು ಸಾರ್ವಭೌಮ ಶ್ರೀರಾಘವೇಂದ್ರ ಸ್ವಾಮಿಗಳ 353ನೇ ಆರಾಧಾನಾ ಮಹೋತ್ಸವ ಪ್ರಯುಕ್ತ ಗುರುವಾರ ಉತ್ತರಾರಾಧನೆ ವಿಜೃಂಭಣೆಯಿಂದ ನಡೆಯಿತು.
ಶ್ರೀರಾಘವೇಂದ್ರ ಸ್ವಾಮಿಗಳ ಉತ್ಸವ ಮೂರ್ತಿಯನ್ನು ಶ್ರೀ ಮಠದ ಆವರಣದಿಂದ ಕಲಾ ತಂಡಗಳ ಮೆರವಣಿಗೆ ಮೂಲಕ ಶ್ರೀ ಗುರುಸಾರ್ವಭೌಮ ವಿದ್ಯಾಪೀಠದ ಆವರಣಕ್ಕೆ ಸಂಭ್ರಮ ಸಡಗರಗಳೊಂದಿಗೆ ತರಲಾಯಿತು.
ವಿದ್ಯಾಪೀಠದ ವಿದ್ಯಾರ್ಥಿಗಳು ರಾಘವೇಂದ್ರ ಅಷ್ಟೋತ್ತರ ಪಠಿಸಿದ ನಂತರ ಶ್ರೀ ಮಠಕ್ಕೆ ಕರೆತಂದು ಮೂಲ ಬೃಂದಾವನ ಪೂಜೆ ಸಲ್ಲಿಸಲಾಯಿತು. ನಂತರ ವಸಂತೋತ್ಸವ ಹಾಗೂ ಮಹಾರಥೋತ್ಸವ ಜರುಗಿತು.
ಮಂತ್ರಾಲಯದಲ್ಲಿ ಗುರುವಾರ ಮೈಸೂರು ರಾಜಮನೆತನದ ವಂಶಸ್ಥ ಹಾಗೂ ಸಂಸದರೂ ಆದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಶ್ರೀ ಸುಬುಧೇಂದ್ರ ತೀರ್ಥರು ಶ್ರೀಮಠದ ವತಿಯಿಂದ ‘ಶ್ರೀರಾಘವೇಂದ್ರ ಅನುಗ್ರಹ ಪ್ರಶಸ್ತಿ‘ ಪ್ರದಾನ ಮಾಡಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.