ADVERTISEMENT

ರಾಯಚೂರು: ಕಾಂಗ್ರೆಸ್ ಮುಖಂಡರ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 8:20 IST
Last Updated 23 ನವೆಂಬರ್ 2020, 8:20 IST
ಕಾಂಗ್ರೆಸ್ ಮುಖಂಡರನ್ನು ತೆರೆದ ವಾಹನದ ಮೂಲಕ ಮೆರವಣಿಗೆ ಮಾಡಿ ಕರೆತರಲಾಯಿತು
ಕಾಂಗ್ರೆಸ್ ಮುಖಂಡರನ್ನು ತೆರೆದ ವಾಹನದ ಮೂಲಕ ಮೆರವಣಿಗೆ ಮಾಡಿ ಕರೆತರಲಾಯಿತು   

ರಾಯಚೂರು: ಮಸ್ಕಿಯಲ್ಲಿ ಆಯೋಜಿಸಿರುವ ಕಾಂಗ್ರೆಸ್ ಸಮಾವೇಶ ಹಾಗೂ ಆರ್.ಬಸನಗೌಡ ಅವರ ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಭಾಗವಹಿಸಲು ಬಂದಿರುವ ಮುಖಂಡರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡುವ ಮೂಲಕ ವೇದಿಕೆಗೆ ಕರೆತರಲಾಯಿತು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ ಹಾಗೂ ಜಿಲ್ಲೆಯ ಮುಖಂಡರು ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT