ADVERTISEMENT

12ರ ನಂತರ ಕೃಷ್ಣಾ ನದಿಗೆ ‌ನೀರು: ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ 

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 11:28 IST
Last Updated 11 ಜುಲೈ 2020, 11:28 IST
ಆರ್.ವೆಂಕಟೇಶಕುಮಾರ್
ಆರ್.ವೆಂಕಟೇಶಕುಮಾರ್   

ರಾಯಚೂರು: ಮಹಾರಾಷ್ಟ್ರದಲ್ಲಿ ನಿರಂತರ ಭಾರಿ ಮಳೆ ಸುರಿಯುತ್ತಿದ್ದು, ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. ನಾರಾಯಣಪುರ ಕೆಳಭಾಗ ಕೃಷ್ಣಾನದಿಗೆ ಜುಲೈ 12 ರ ನಂತರ ಯಾವುದೇ ಕ್ಷಣದಲ್ಲಿ ನೀರು ಹರಿಬಿಡುವ ಸಾಧ್ಯತೆ ಇದ್ದು, ನದಿಪಾತ್ರದಲ್ಲಿ ಜನರು ಜಾಗೃತಿ ವಹಿಸುವಂತೆ ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಸೂಚನೆ ನೀಡಿದ್ದಾರೆ.

ನದಿ ಪಾತ್ರದಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ಜಾಗೃತಿ ವಹಿಸುವ ನಿಟ್ಟಿನಲ್ಲಿ ಕೃಷ್ಣಾನದಿ ಪಾತ್ರದ ಗ್ರಾಮಗಳಲ್ಲಿ ಡಂಗುರದ ಮೂಲಕ ಜಾಗೃತಿ ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂದು ಕೃಷ್ಣಾನದಿ ಪಾತ್ರದ ಹೋಬಳಿಗಳ ಕಂದಾಯ ನಿರೀಕ್ಷಕರಿಗೆ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT