ADVERTISEMENT

ರಾಯಚೂರು: ಕುಳುವ ಸಂಘದಿಂದ ಪತ್ರ ಚಳವಳಿ

​ಪ್ರಜಾವಾಣಿ ವಾರ್ತೆ
Published 10 ಜೂನ್ 2020, 11:31 IST
Last Updated 10 ಜೂನ್ 2020, 11:31 IST
ಸಿಂಧನೂರಿನ ಅಂಚೆ ಕಚೇರಿಯಲ್ಲಿ ಅಖಿಲ ಕರ್ನಾಟಕ ಕುಳುವ ಮಹಾಸಂಘ ತಾಲ್ಲೂಕು ಘಟಕದಿಂದ ಬುಧವಾರ ಪತ್ರ ಚಳವಳಿ ನಡೆಸಿ ಸಿಎಂಗೆ ಒತ್ತಾಯಿಸಲಾಯಿತು
ಸಿಂಧನೂರಿನ ಅಂಚೆ ಕಚೇರಿಯಲ್ಲಿ ಅಖಿಲ ಕರ್ನಾಟಕ ಕುಳುವ ಮಹಾಸಂಘ ತಾಲ್ಲೂಕು ಘಟಕದಿಂದ ಬುಧವಾರ ಪತ್ರ ಚಳವಳಿ ನಡೆಸಿ ಸಿಎಂಗೆ ಒತ್ತಾಯಿಸಲಾಯಿತು   

ಸಿಂಧನೂರು: ಕೊರಮ, ಕೊರಚ, ಭೋವಿ ಮತ್ತು ಲಂಬಾಣಿ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಲ್ಲಿಯೇ ಮುಂದುವರೆಸುವಂತೆ ಒತ್ತಾಯಿಸಿ ಬುಧವಾರ ಅಖಿಲ ಕರ್ನಾಟಕ ಕುಳುವ ಮಹಾಸಂಘ ತಾಲ್ಲೂಕು ಘಟಕದಿಂದ ಸ್ಥಳೀಯ ಅಂಚೆ ಕಚೇರಿಯಲ್ಲಿ ಪತ್ರ ಚಳವಳಿ ನಡೆಸಲಾಯಿತು.

ಕೆಲವು ಪಟ್ಟಭದ್ರ ಹಿತಾಶಕ್ತಿಗಳು ಮತ್ತು ರಾಜಕೀಯ ಪ್ರೇರಿತ ಕುತಂತ್ರಿಗಳು ಈ ಜಾತಿಗಳ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಇದು ಸರಿಯಲ್ಲ ಎಂದು ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಮಕೃಷ್ಣ ಭಜಂತ್ರಿ ಅಸಮಾಧಾನ ವ್ಯಕ್ತಪಡಿಸಿದರು.

ಅಸಮಾನತೆ, ತಾರತಮ್ಯ ಹಾಗೂ ಸಾಮಾಜಿಕ ಕಳಂಕಕ್ಕೆ ಗುರಿಯಾಗಿ ಸಮಾಜದ ಮುಖ್ಯವಾಹಿನಿಗೆ ಬರಲಾಗದೆ ಅಲೆಮಾರಿ ಜಾತಿಗಳಾಗಿಯೇ ಉಳಿದಿವೆ. ಆದ್ದರಿಂದ ಈ ಜಾತಿಗಳು ಯಥಾಸ್ಥಿತಿಯಂತೆ ಎಸ್‍ಸಿ ಪಟ್ಟಿಯಲ್ಲಿಯೇ ಮುಂದುವರೆಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

ADVERTISEMENT

ದುರುಗಪ್ಪ ಕಾರಲಕುಂಟಿ, ಹನುಮಂತ ಎಲೆಕೂಡ್ಲಿಗಿ, ಬಸವರಾಜ ಸುಂಕೇಶ್ವರ, ಬುಡ್ಡಪ್ಪ, ತಿಮ್ಮಣ್ಣ ವಗರನಾಳ, ಕೆಂಪ ಈರಪ್ಪ ಚಿರತ್ನಾಳ, ಅಂಬಣ್ಣ, ಬಳ್ಳಾರೆಪ್ಪ, ಬಾಲಪ್ಪ, ಮರಿಯಪ್ಪ, ರಾಮು, ಹುಲುಗಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.