ADVERTISEMENT

ರೈತರಿಗೆ ಪರಿಹಾರ ನೀಡಲು ಒತ್ತಾಯ

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 15:45 IST
Last Updated 8 ಜೂನ್ 2020, 15:45 IST
ರಾಯಚೂರಿನ ಜಿಲ್ಲಾಡಳಿತ ಕಚೇರಿ ಸಿಬ್ಬಂದಿಗೆ ಕರ್ನಾಟಕ ಪಿಂಜಾರ, ನದಾಫ ಸಂಘಗಳ ಮಹಾಮಂಡಳಿ ಪದಾಧಿಕಾರಿಗಳು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು
ರಾಯಚೂರಿನ ಜಿಲ್ಲಾಡಳಿತ ಕಚೇರಿ ಸಿಬ್ಬಂದಿಗೆ ಕರ್ನಾಟಕ ಪಿಂಜಾರ, ನದಾಫ ಸಂಘಗಳ ಮಹಾಮಂಡಳಿ ಪದಾಧಿಕಾರಿಗಳು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು   

ರಾಯಚೂರು: ಕೊರೊನಾ ಲಾಕಡೌನ್‌ನಿಂದ ಕಷ್ಟದಲ್ಲಿರುವ ರೈತರಿಗೆ ಉಚಿತ ಬೀಜ, ಗೊಬ್ಬರವನ್ನು ಪೂರೈಸಬೇಕು ಹಾಗೂ ಸರ್ಕಾರ ಸಣ್ಣ, ಅತಿ ಸಣ್ಣ ರೈತರಿಗೆ ಆರ್ಥಿಕ ಸಹಾಯಕ್ಕಾಗಿ ಘೋಷಿಸಲಾದ ಪರಿಹಾರವನ್ನು ತಕ್ಷಣವೇ ನೀಡಬೇಕು ಎಂದು ಕರ್ನಾಟಕ ಪಿಂಜಾರ, ನದಾಫ, ಮನ್ಸೂರಿ ಸಂಘಗಳ ಮಹಾಮಂಡಳಿ ಪದಾಧಿಕಾರಿಗಳು ಸೋಮವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

2019-20 ರಲ್ಲಿ ಹಿಂಗಾರು ಬೆಳೆಗಳಿಗೆ ತುಂಬಿದ ಬೆಳೆವಿಮಾ ಹಣ ಇನ್ನೂ ಪಾವತಿಯಾಗಿಲ್ಲ. ತಕ್ಷಣ ರೈತರಿಗೆ ಬೆಳೆವಿಮಾ ನೀಡಬೇಕು. ವಿವಿಧ ಯೋಜನೆಯಡಿ ಫಲಾನುಭವಿಗಳಿಗೆ ತೊಡಕಾಗಿರುವ ಸಮಸ್ಯೆ ಪರಿಶೀಲಿಸಿ ತಕ್ಷಣ ಪರಿಹಾರ ಸಿಗುವಂತೆ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಡಾ. ಅಬ್ದುಲ್ ರಝಾಕ ನದಾಫ, ಜಿಲ್ಲಾ ಘಟಕದ ಅಧ್ಯಕ್ಷ ಬಾಬಾ ಕಲ್ಮಲ್, ಕಾಸಿಂಸಾಬ್ ಯಳ್ಳಿಮನಿ, ಹುಸೇನಸಾಬ ನದಾಫ್, ಡಾ. ದಾವಲಸಾಬ್ ತೋಟದ್, ತಾಜುದ್ದೀನ್ ಜಹಗೀರದಾರ್, ನವೀನ್ ಕುರಹಟ್ಟಿ, ರಾಜಮಹಮ್ಮದ್ ಇದ್ದರು

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.