ರಾಯಚೂರು:ಗುರುವಾರ ರಾತ್ರಿ ಬೀಸಿದ ಬಿರುಗಾಳಿ ಹಾಗೂ ಮಳೆಯಿಂದ ಗುಡಿಸಲು ಗೋಡೆ ಕುಸಿದು ಇಬ್ಬರು ಮೊಮ್ಮಕ್ಕಳೊಂದಿಗೆ ಅಜ್ಜಿಯೊಬ್ಬರು ಮೃತಪಟ್ಟಿರುವ ಹೃದಯ ಕಲಕುವ ಘಟನೆ ತಾಲ್ಲೂಕಿನ ಕೊತ್ತದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಗೋವಿಂದಮ್ಮ (55), ಶಿವಾನಿ (3) ಹಾಗೂ ಮಲ್ಲಿಕಾರ್ಜುನ (5 ತಿಂಗಳು) ಮೃತಪಟ್ಟಿದ್ದಾರೆ.
ಪತಿಯ ಮನೆಯಲ್ಲಿದ್ದ ಮಗಳನ್ನು ನೋಡುವುದಕ್ಕಾಗಿ ಗೋವಿಂದಮ್ಮ ಅವರು ಬಂದಿದ್ದರು. ಇಡುಪನೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂದರಿಂದ ಸಾಂತ್ವನ; ಪರಿಹಾರ ಭರವಸೆ
ಕೊತ್ತದೊಡ್ಡಿ ಗ್ರಾಮಕ್ಕೆ ನೂತನ ಸಂಸದ ರಾಜಾ ಅಮರೇಶ್ವರ ಅವರು ಭೇಟಿ ನೀಡಿ ಸಾಂತ್ವನ ಹೇಳಿದರು. ಸರ್ಕಾರದಿಂದ ಪರಿಹಾರ ದೊರಕಿಸುವ ಭರವಸೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.