ರಾಯಚೂರು:ಜಿಲ್ಲೆಯಾದ್ಯಂತ ಮಂಗಳವಾರ ಬೆಳಿಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣ ಕಂಡುಬಂತು. ರಾಯಚೂರು ತಾಲ್ಲೂಕಿನಲ್ಲಿ ಸಂಜೆ ಅರ್ಧ ಗಂಟೆ ಮಳೆ ಸುರಿಯಿತು.
ಮಾನ್ವಿ ಮತ್ತು ದೇವದುರ್ಗ ತಾಲ್ಲೂಕುಗಳಲ್ಲಿ ತುಂತುರು ಮಳೆ ಬಿದ್ದಿದೆ. ಸಿಂಧನೂರು, ಸಿರವಾರ, ಮಸ್ಕಿ ಹಾಗೂ ಲಿಂಗಸುಗೂರು ತಾಲ್ಲೂಕುಗಳಲ್ಲಿ ಮೋಡಗಳು ದಟ್ಟವಾಗಿದ್ದರೂ ಮಳೆ ಬೀಳಲಿಲ್ಲ.
ಜಿಲ್ಲೆಯಾದ್ಯಂತ ರೈತರು ಮುಂಗಾರು ಬಿತ್ತನೆ ಮಾಡಿದ್ದು, ಮಳೆಯಿಂದ ಬೆಳೆಗಳಿಗೆ ಅನುಕೂಲಕರವಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.