ರಾಯಚೂರು: ಜಿಲ್ಲೆಯ ವಿವಿಧೆಡೆ ಶನಿವಾರ ಸಾಧಾರಣ ಮಳೆ ಸುರಿದಿದೆ.
ರಾಯಚೂರು ನಗರ, ಶಕ್ತಿನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲಕಾಲ ಬಿರುಸಾಗಿ ಮಳೆ ಸುರಿಯಿತು. ರಸ್ತೆಗಳಲ್ಲಿ, ತಗ್ಗು-ದಿನ್ನೆಗಳಲ್ಲಿ ನೀರು ಸಂಗ್ರಹವಾಯಿತು. ಇದರಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.
ಮಳೆಯಿಂದ ಬೆಳೆಗಳಿಗೆ ಅನುಕೂಲವಾಗಿದೆ. ಈಗಾಗಲೇ ಬೆಳೆಗಳಲ್ಲಿದ್ದ ಕಳೆ ತೆಗೆದಿರುವ ರೈತರು ಸಂತುಷ್ಟಗೊಂಡಿದ್ದಾರೆ.
ತೊಗರಿ, ಹತ್ತಿ ಹಾಗೂ ಭತ್ತದ ಬೆಳೆಗಳು ಹುಲುಸಾಗಿ ಬೆಳೆದಿವೆ. ತೇವಾಂಶದ ಕೊರತೆಯಿಲ್ಲ.
ಮಳೆಯಿಂದ ಯಾವುದೇ ಹಾನಿ ಉಂಟಾಗಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.