ADVERTISEMENT

ಸಂಭ್ರಮದಿಂದ ರಾಮನವಮಿ ಆಚರಣೆ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2019, 12:38 IST
Last Updated 13 ಏಪ್ರಿಲ್ 2019, 12:38 IST
ರಾಯಚೂರಿನ ಸ್ಟೇಷನ್‌ ರಸ್ತೆಯ ಶ್ರೀರಾಮನ ದೇವಸ್ಥಾನದಲ್ಲಿ ರಾಮನವಮಿ ನಿಮಿತ್ತ ಶನಿವಾರ ನಡೆದ ಕಲ್ಯಾಣೋತ್ಸವದಲ್ಲಿ ಭಕ್ತರು ಪಾಲ್ಗೊಂಡಿದ್ದರು
ರಾಯಚೂರಿನ ಸ್ಟೇಷನ್‌ ರಸ್ತೆಯ ಶ್ರೀರಾಮನ ದೇವಸ್ಥಾನದಲ್ಲಿ ರಾಮನವಮಿ ನಿಮಿತ್ತ ಶನಿವಾರ ನಡೆದ ಕಲ್ಯಾಣೋತ್ಸವದಲ್ಲಿ ಭಕ್ತರು ಪಾಲ್ಗೊಂಡಿದ್ದರು   

ರಾಯಚೂರು: ಆದರ್ಶ ಪುರುಷ ಶ್ರೀರಾಮ ನವಮಿಯನ್ನು ಸಂಭ್ರಮದಿಂದ ಶನಿವಾರ ವಿವಿಧೆಡೆ ಆಚರಿಸಲಾಯಿತು.

ಸ್ಟೇಷನ್‌ ರಸ್ತೆಯ ರಾಮಮಂದಿರದಲ್ಲಿ ಬೆಳಿಗ್ಗೆಯಿಂದಲೇ ಭಕ್ತರು ನೆರೆದಿದ್ದರು. ಅರವಿಂದ ಆಚಾರ್ಯ ಹಾಗೂ ಮಾರುತಿ ಆಚಾರ್ಯ ಅವರ ನೇತೃತ್ವದಲ್ಲಿ ಶ್ರೀರಾಮನ ಕಲ್ಯಾಣೋತ್ಸವ ನೆರವೇರಿಸಲಾಯಿತು. ವಿಶೇಷ ಪೂಜೆ, ‍ಪುಷ್ಪಾಲಂಕಾರ ಸಲ್ಲಿಸಲಾಯಿತು.

ವಿವಿಧೆಡೆಯಿಂದ ಬಂದಿದ್ದ ಭಕ್ತರು ಅಲಂಕೃತ ಶ್ರೀರಾಮನ ದರ್ಶನ ಪಡೆದು ಪುನೀತರಾದರು. ಶ್ರೀರಾಮ, ಸೀತಾ, ಲಕ್ಷ್ಮಣ ಹಾಗೂ ಹನುಮಂತ ಇರುವ ಭಾವಚಿತ್ರವನ್ನಿಟ್ಟು ಅಲಂಕಾರ ಮಾಡಲಾಗಿತ್ತು. ನವಮಿ ನಿಮಿತ್ತ ಪಾನಕ ಹಾಗೂ ಕೋಸಂಬರಿ ವಿತರಿಸಲಾಯಿತು.

ADVERTISEMENT

ನಿಜಲಿಂಗಪ್ಪ ಕಾಲೋನಿಯಲ್ಲಿರುವ ಕೋದಂಡರಾಮನ ದೇವಸ್ಥಾನದಲ್ಲೂ ವಿಶೇಷ ಪೂಜಾ ಕಾರ್ಯಕ್ರಮಗಳು ನೆರವೇರಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.