ಕವಿತಾಳ: ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವದ ಅಂಗವಾಗಿ ಪಟ್ಟಣದ ವಾಸವಿ ದೇವಸ್ಥಾನದಲ್ಲಿ ಸೋಮವಾರ ರಥೋತ್ಸವ ಸಂಭ್ರಮದಿಂದ ಜರುಗಿತು.
ಪೂರ್ವಾರಾಧನೆ, ಮಧ್ಯಾರಾಧನೆ, ಉತ್ತರಾರಾಧನೆ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರ ಮಗಳು ನಡೆದವು. ರಾಯರ ವಿಗ್ರಹಕ್ಕೆ ನೈರ್ಮಲ್ಯ ವಿಸರ್ಜನೆ, ಫಲ ಪಂಚಾಮೃತ ಅಭಿಷೇಕ, ಅಷ್ಠೋತ್ತರ, ತುಳಸಿ ಅರ್ಚನೆ, ನೈವೇದ್ಯ, ಅಸ್ತೋದಕ ಸಮರ್ಪಣೆ ಮತ್ತು ಮಹಾಮಂಗಳಾರತಿ ಸೇರಿ ವಿವಿಧ ಪೂಜೆಗಳನ್ನು ನೆರವೇರಿಸಲಾಯಿತು.
ಅರ್ಚಕ ಜಯತೀರ್ಥ ಆಚಾರ್ ಅವರು ಪೂಜಾ ಕಾರ್ಯಕ್ರಮ ನಡೆಸಿಕೊಟ್ಟರು.
ಮಂಗಳವಾರ ಮಧ್ಯಾಹ್ನ ನಡೆದ ರಥೋತ್ಸವದಲ್ಲಿ ಆರ್ಯ ವೈಶ್ಯ ಸಮಾಜ ಹಾಗೂ ಬ್ರಾಹ್ಮಣ ಸಮಾಜದ ಮುಖಂಡರು, ಮಹಿಳೆಯರು, ಮಕ್ಕಳು ಪಾಲ್ಗೊಂಡಿದ್ದರು. ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.