ADVERTISEMENT

ಬಸ್‌ಪಾಸ್ ಸೌಲಭ್ಯ ಕಲ್ಪಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 11:36 IST
Last Updated 5 ಅಕ್ಟೋಬರ್ 2021, 11:36 IST
ಲಿಂಗಸುಗೂರಲ್ಲಿ ಮಂಗಳವಾರ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾರತ ವಿದ್ಯಾರ್ಥಿ ಫೆಡರೇಷನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು
ಲಿಂಗಸುಗೂರಲ್ಲಿ ಮಂಗಳವಾರ ಶಾಲಾ ಕಾಲೇಜು ವಿದ್ಯಾರ್ಥಿಗಳು ಭಾರತ ವಿದ್ಯಾರ್ಥಿ ಫೆಡರೇಷನ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು   

ಲಿಂಗಸುಗೂರು: ತಾಲ್ಲೂಕಿನಲ್ಲಿ ಶಾಲಾ, ಕಾಲೇಜು ಆರಂಭಗೊಂಡು ಮೂರು ತಿಂಗಳಾದರು ಕೂಡ ಸಾರಿಗೆ ಸಂಸ್ಥೆ ಬಸ್‍ ಪಾಸ್‍ ಸೌಲಭ್ಯ ಕಲ್ಪಿಸಲು ಮೀನಾಮೇಷ ನಡೆಸುತ್ತಿರುವುದನ್ನು ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‍ (ಎಸ್‍ಎಫ್‍ಐ) ನೇತೃತ್ವದಲ್ಲಿ ಶಾಲಾ ಮಕ್ಕಳು ಪ್ರತಿಭಟನೆ ನಡೆಸಿದರು.

ಮಂಗಳವಾರ ಸ್ಥಳೀಯ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನೆ ನಡೆಸುತ್ತ ಸಾರಿಗೆ ಘಟಕವರೆಗೆ ಸಾಗಿಬಂದರು. ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಶಾಲಾ ಕಾಲೇಜು ಮಕ್ಕಳಿಗೆ ನೀಡಬಹುದಾದ ಬಸ್‌ಪಾಸ್‍ ಸೌಲಭ್ಯ ಕಲ್ಪಿಸಲು ಯಾವುದೇ ಪರ್ಯಾಯ ವ್ಯವಸ್ಥೆ ಮಾಡುತ್ತಿಲ್ಲ. ಹಳೆ ಪಾಸ್‍ ಬಳಸಿ ತಿರುಗಾಡಲು ಅನುಮತಿ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ನಿತ್ಯ ದೂರದ ಗ್ರಾಮಗಳಿಂದ ಹಣ ಖರ್ಚು ಮಾಡಿ ಶಾಲಾ ಕಾಲೇಜಿಗೆ ಬರಲು ಆಗದೆ ಶೈಕ್ಷಣಿಕವಾಗಿ ಸಂಕಷ್ಟ ಎದುರಿಸುತ್ತಿದ್ದೇವೆ. ಗ್ರಾಮೀಣ ಪ್ರದೇಶಗಳಿಗೆ ಬಸ್‍ ಸಂಚಾರ ಕಲ್ಪಿಸದೆ ಹೋಗಿದ್ದರಿಂದ ಖಾಸಗಿ ವಾಹನಗಳಲ್ಲಿ ಬಂದು ಹೋಗುವಂತಾಗಿದೆ. ಹೀಗಾಗಿ ವಿದ್ಯಾರ್ಥಿ ಸಮೂಹ ಭಾರಿ ತೊಂದರೆ ಅನುಭವಿಸುತ್ತಿದ್ದೇವೆ. ಹೊಸದಾಗಿ ಪಾಸ್‍ ನೀಡುವವರೆಗೆ ಹಳೆ ಪಾಸ್‍ ಮತ್ತು ಶಾಲೆ ರಸೀದಿ ಮಾನ್ಯ ಮಾಡಬೇಕು‘ ಎಂದು ಒತ್ತಾಯಿಸಿದರು.

ADVERTISEMENT

ಮುಖಂಡರಾದ ತಿಪ್ಪಣ್ಣ ನಿಲೋಗಲ್‍, ಪ್ರಲ್ಹಾದ, ರಮೇಶ, ಮಲ್ಲೇಶ, ಮೊಹ್ಮದ ಅನೀಫ್‍, ಅಮರೇಶ, ಸೂಗೂರೇಶ, ಹನುಮಂತ, ಪಾರ್ವತಿ, ಅಂಬಮ್ಮ, ಸರಸ್ವತಿ, ಪಾತಿಮಾ, ಬೇಬಿ, ಹುಲಿಗೆಮ್ಮ, ಅನುಸೂಯಾ, ಅಮರಮ್ಮ, ಲಕ್ಷ್ಮಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.