ADVERTISEMENT

ಸವಿತಾ ಮಹರ್ಷಿ ಪುತ್ಥಳಿ ಸ್ಥಾಪನೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 1 ಜೂನ್ 2019, 12:54 IST
Last Updated 1 ಜೂನ್ 2019, 12:54 IST
ರಾಯಚೂರಿನಲ್ಲಿ ಸವಿತಾ ಮಹರ್ಷಿ ಪುತ್ತಳಿ ಸ್ಥಾಪಿಸಲು ಒತ್ತಾಯಿಸಿ ಶನಿವಾರ ಕರ್ನಾಟಕ ರಾಜ್ಯ ಸವಿತಾ ಸಮಾಜ ಜಿಲ್ಲಾ ಘಟಕದ ಸದಸ್ಯರು ಜಿಲ್ಲಾಡಳಿತದ ಅಧಿಕಾರಿಗೆ ಮನವಿ ಸಲ್ಲಿಸಿದರು
ರಾಯಚೂರಿನಲ್ಲಿ ಸವಿತಾ ಮಹರ್ಷಿ ಪುತ್ತಳಿ ಸ್ಥಾಪಿಸಲು ಒತ್ತಾಯಿಸಿ ಶನಿವಾರ ಕರ್ನಾಟಕ ರಾಜ್ಯ ಸವಿತಾ ಸಮಾಜ ಜಿಲ್ಲಾ ಘಟಕದ ಸದಸ್ಯರು ಜಿಲ್ಲಾಡಳಿತದ ಅಧಿಕಾರಿಗೆ ಮನವಿ ಸಲ್ಲಿಸಿದರು   

ರಾಯಚೂರು: ನಗರದಲ್ಲಿ ಸವಿತಾ ಮಹರ್ಷಿ ಪುತ್ಥಳಿಯನ್ನು ಸ್ಥಾಪಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸವಿತಾ ಸಮಾಜ ಜಿಲ್ಲಾ ಘಟಕದ ಸದಸ್ಯರು ಜಿಲ್ಲಾಧಿಕಾರಿಗೆ ಶನಿವಾರ ಮನವಿ ಸಲ್ಲಿಸಿದರು.

ವಿವಿಧ ಸಮಾಜಗಳ ಮಹಾನ್‌ ವ್ಯಕ್ತಿಗಳ ಪುತ್ಥಳಿ ಸ್ಥಾಪನೆ ಮಾಡಲಾಗಿದ್ದು, ಸವಿತಾ ಸಮಾಜದ ಸವಿತಾ ಮಹರ್ಷಿ ಪುತ್ಥಳಿಯನ್ನು ಸ್ಥಾಪನೆ ಮಾಡದಿರುವುದು ಸಮಾಜಕ್ಕೆ ಅನ್ಯಾಯ ಮಾಡಿದಂತಾಗುತ್ತದೆ. ಸರ್ಕಾರದಿಂದ ಜಯಂತಿ ಆಚರಣೆ ಮಾಡಲಾಗುತ್ತದೆ. ಜಯಂತಿ ಸಂದರ್ಭದಲ್ಲಿ ಪುತ್ಥಳಿಗೆ ಪೂಜೆ ಸಲ್ಲಿಸಲು ಅನುಕೂಲವಾಗಲು ಮಾವಿನಕೆರೆಯ ದಡದಲ್ಲಿ ವೀರ ಸಾವರ್ಕರ್‌ ಪುತ್ಥಳಿ ಪಕ್ಕದಲ್ಲಿ ಸ್ಥಾಪಿಸಬೇಕು ಎಂದು ಆಗ್ರಹಿಸಿದರು.

ನಾಗಲದಿನ್ನಿ ಶ್ರೀನಿವಾಸ, ವೆಂಕಟೇಶ ವಲ್ಲೂರು, ಸಿ.ಎ.ಗೋವಿಂದ, ನಾಗರಾಜ, ಇಲಕಲ್ ವೀರೇಶ, ರಮೇಶ, ರಾಮಕೃಷ್ಣ ಮಲಿಗಿವೇಲಿ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.