ADVERTISEMENT

48 ಕುಟುಂಬಗಳಿಗೆ ಪುನರ್ವಸತಿ ನಿವೇಶನ ಹಕ್ಕುಪತ್ರ ವಿತರಣೆ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2025, 7:07 IST
Last Updated 10 ಸೆಪ್ಟೆಂಬರ್ 2025, 7:07 IST
ರಾಯಚೂರಿನ ದಿನ್ನಿ ಗ್ರಾಮದಲ್ಲಿ ಶಾಸಕ ಬಸನಗೌಡ ದದ್ದಲ್ ಸಮ್ಮುಖದಲ್ಲಿ ಹಕ್ಕುಪತ್ರ ವಿತರಣೆ ಮಾಡಲಾಯಿತು
ರಾಯಚೂರಿನ ದಿನ್ನಿ ಗ್ರಾಮದಲ್ಲಿ ಶಾಸಕ ಬಸನಗೌಡ ದದ್ದಲ್ ಸಮ್ಮುಖದಲ್ಲಿ ಹಕ್ಕುಪತ್ರ ವಿತರಣೆ ಮಾಡಲಾಯಿತು   

ರಾಯಚೂರು: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರೂ ಆದ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ತಾಲ್ಲೂಕಿನ ದಿನ್ನಿ ಮತ್ತು ನೆಲಹಾಳ ಗ್ರಾಮದಲ್ಲಿ ಆಶ್ರಯ ಯೋಜನೆಯಡಿ 48 ಕುಟುಂಬಗಳಿಗೆ ಪುನರ್ವಸತಿ ನಿವೇಶನ ಹಕ್ಕಪತ್ರಗಳನ್ನು ವಿತರಿಸಿದರು.

ನೆಲಹಾಳ ಗ್ರಾಮದಲ್ಲಿ ಎರಡು ಶಾಲಾ ಕೊಠಡಿಗಳ ಕಾಮಗಾರಿ, ಮುಖ್ಯರಸ್ತೆಗೆ ಹೊಂದಿಕೊಂಡು ಸಿಸಿ ರಸ್ತೆ ಕಾಮಗಾರಿ ಜೊತೆಗೆ ಜಲಧಾರೆ ಯೋಜನೆಯ ಕಾಮಗಾರಿಗಳನ್ನು ವೀಕ್ಷಣೆ ಮಾಡಿದರು.

ನಂತರ ಮಾತನಾಡಿ, ‘ಸುಮಾರು ವರ್ಷಗಳಿಂದ ಗ್ರಾಮದ ನಿವಾಸಿಗಳು ನಿವೇಶನದ ಹಕ್ಕುಪತ್ರಗಳ ಬೇಡಿಕೆ ಇಟ್ಟಿದ್ದರು. ಗ್ರಾಮೀಣ ವಾಸಿಗಳ ಬೇಡಿಕೆ ನ್ಯಾಯಯುತವಾಗಿದೆ ಎಂದು ಗ್ರಾಮಸ್ಥರ ಆಶೋತ್ತರಕ್ಕೆ ಸ್ಪಂದಿಸಿ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಲಾಗಿದೆ’ ಎಂದು ತಿಳಿಸಿದರು.

ADVERTISEMENT

ಗಿಲ್ಲೇಸೂಗುರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ಗ್ರಾಮದ ಹಿರಿಯ ಮುಖಂಡರು, ಸುತ್ತಲಿನ ಗ್ರಾಮಗಳ ಹಿರಿಯ ಮುಖಂಡರು, ನಾಮನಿರ್ದೇಶಿತ ಸದಸ್ಯರು, ತಾಲ್ಲೂಕುಮಟ್ಟದ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.