ADVERTISEMENT

ರಾಯಚೂರು: ಅಂತ್ಯಸಂಸ್ಕಾರಕ್ಕೆ ತೆರಳಿದ್ದ ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2020, 14:39 IST
Last Updated 4 ಸೆಪ್ಟೆಂಬರ್ 2020, 14:39 IST
ಜಾಲಹಳ್ಳಿ ಹೋಬಳಿಯ ಚಿಂಚೋಡಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ
ಜಾಲಹಳ್ಳಿ ಹೋಬಳಿಯ ಚಿಂಚೋಡಿ ಬಳಿ ನಡೆದ ರಸ್ತೆ ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ   

ಜಾಲಹಳ್ಳಿ: ಇಲ್ಲಿಗೆ ಸಮೀಪ ಚಿಂಚೋಳಿ ಗ್ರಾಮದ ಬಳಿ ತಿಂಥಣಿ ಬ್ರಿಡ್ಜ್‌–ಕಲ್ಮಲಾ ರಾಜ್ಯಹೆದ್ದಾರಿಯಲ್ಲಿ ಕಾರು–ಲಾರಿ ಮಧ್ಯೆ ಶುಕ್ರವಾರ ಡಿಕ್ಕಿ ಉಂಟಾಗಿ ಒಬ್ಬರು ಮಹಿಳೆ ಸೇರಿ ಮೂವರು ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಲಿಂಗಸುಗೂರು ತಾಲ್ಲೂಕಿನ ದೇವರಭೂಪುರ ಗ್ರಾಮದ ಪದ್ದಮ್ಮ ಹನುಮನಗೌಡ (40), ಅಂಬಣ್ಣಗೌಡ ಆದನಗೌಡ (65) ಹಾಗೂ ರಾಮಣ್ಣಾ ಗುಡದನಾಳ (90) ಮೃತಪಟ್ಟಿದ್ದಾರೆ. ಗುಂಡಪ್ಪ ಯರಡೋಣಿ, ಶಿವನಗೌಡ ಪೊಲೀಸ್‌ಪಾಟೀಲ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಜಾಲಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಿ ಕಾರಿನಲ್ಲಿ ಮರಳುವಾಗ ಅಪಘಾತ ಉಂಟಾಗಿದೆ. ಅಪಘಾತದಿಂದ ಕಾರು ನಜ್ಜುಗುಜ್ಜಾಗಿದೆ. ಗ್ರಾಮದ ಜನರೆಲ್ಲ ಸ್ಥಳಕ್ಕೆ ಧಾವಿಸಿ, ಗಾಯಗೊಂಡವರನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು. ಕೆಲವು ಸಮಯದ ಬಳಿಕ ಸ್ಥಳಕ್ಕೆ ಬಂದ ಸಂಬಂಧಿಗಳ ಆಕ್ರಂದನ ಮುಗಿಲುಮುಟ್ಟಿತ್ತು.ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.