ಮಸ್ಕಿ (ರಾಯಚೂರು): ಮಸ್ಕಿ ಉಪಚುನಾವಣೆ ಸಂಬಂಧ ಕಾಂಗ್ರೆಸ್ನಿಂದ ರ್ಯಾಲಿ ಆಯೋಜಿಸಲಾಗಿದ್ದು ಪಟ್ಟಣದಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಮುದುಗಲ್ ಕ್ರಾಸ್ 4 ರಸ್ತೆಗಳಲ್ಲಿಯೂ ವಾಹನಗಳು ನಿಂತಿವೆ.
ಸಿಂಧನೂರು ಮಾರ್ಗ, ಲಿಂಗಸಗೂರು ಮಾರ್ಗ, ಮುದಗಲ್ ಮಾರ್ಗ ಹಾಗೂ ಪಟ್ಟಣ ಪ್ರವೇಶ ಮಾರ್ಗಗಳಲ್ಲಿ ವಾಹನಗಳು ರಸ್ತೆಯುದ್ದಕ್ಕೂ ನಿಂತುಕೊಂಡಿದೆ. ಕಾಂಗ್ರೆಸ್ ಬೆಂಬಲಿಗರು ವಿವಿಧ ವಾಹನಗಳಲ್ಲಿ ಆಗಮಿಸಿದ್ದು ಘೋಷಣೆಗಳನ್ನು ಕೂಗುತ್ತಿದ್ದಾರೆ.
ವಾಹನಗಳನ್ನು ಜನರನ್ನು ನಿಯಂತ್ರಿಸುವುದಕ್ಕಾಗಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಮುದುಗಲ್ ಕ್ರಾಸ್ನಿಂದ ರ್ಯಾಲಿ ಆರಂಭವಾಗಿ ದೇರ್ ಬೀದಿಗೆ ತಲುಪಲಿದೆ.
ಒಂದುವರೆ ಕಿಲೋಮೀಟರ್ ರ್ಯಾಲಿ ನಡೆಯಲಿದೆ. ಆನಂತರ ಬಹಿರಂಗ ಸಭೆಯನ್ನುದ್ದೇಶಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ ವಿವಿಧ ನಾಯಕರು ಮಾತನಾಡಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.