ರಾಯಚೂರು:ನಗರದ ರೈಲ್ವೆ ನಿಲ್ದಾಣ ಮುಂಭಾಗ ಶುಕ್ರವಾರ ರಾತ್ರಿ ಯುವಕರ ಗುಂಪೊಂದು ರೌಡಿ ಶೀಟರ್ ಗೇಟ್ ಲಕ್ಷ್ಮಣ ಮೇಲೆದಾಳಿ ನಡೆಸಿ ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿದೆ.
ಈ ಸಂಬಂಧ ಪೊಲೀಸರು ಮೂವರು ಶಂಕಿತರನ್ನು ಬಂಧಿಸಿದ್ದಾರೆ. ಬಂಧಿತರ ಹೆಸರು ಬಹಿರಂಗ ಮಾಡಿಲ್ಲ. ಆರೋಪಿಗಳಿಗಾಗಿ ಇನ್ನೂ ಶೋಧ ಮುಂದುವರಿದಿದೆ. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಕೊಲೆ ಘಟನೆಯಿಂದಾಗಿ ಸ್ಟೇಷನ್ ಏರಿಯಾದಲ್ಲಿ ಶುಕ್ರವಾರ ರಾತ್ರಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಶನಿವಾರ ಮರಣೋತ್ತರ ಪರೀಕ್ಷೆಯ ಬಳಿಕ ಶವವನ್ನು ಕುಟುಂಬದವರಿಗೆ ಒಪ್ಪಿಸಲಾಯಿತು.ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.