ರಾಯಚೂರು: ಎರಡು ಮೂರು ದಿನಗಳಲ್ಲಿ ಎಲ್ಲವೂ ಸರಿ ಹೋಗುತ್ತದೆ. ರಮೇಶ್ ಜಾರಕಿಹೊಳಿ ಅವರು ಎಲ್ಲೋ ಬೇರೆ ಕಡೆಗೆ ಹೋಗಿದ್ದಾರೆ. ಸ್ವಲ್ಪ ಬೇಸರದಲ್ಲಿದ್ದಾರೆ. ಆದರೆ ಪಕ್ಷ ಬಿಡುವುದಿಲ್ಲ. ಬಿಜೆಪಿ ಹತಾಶೆಗೊಂಡಿದೆ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳಲು ಶನಿವಾರ ನಗರಕ್ಕೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
‘ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದು ಕೈಬಿಡುವುದು ಸಹಜ ನಿಯಮ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಯಾವ ಸಿಟ್ಟಿಲ್ಲ. ರಮೇಶ್ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾದರೆ ಸ್ಪರ್ಧಿಸಲಿ. ಅವರು ಇಷ್ಟ ಪಟ್ಟರೆ ನಾನೂ ಬೆಂಬಲಿಸುತ್ತೇನೆ’ ಎಂದರು.
ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನಕ್ಕೆ ಸಚಿವರ ಸಂತಾಪ ಸೂಚಿಸಿದ ಅವರು, ದಕ್ಷ ಅಧಿಕಾರಿಯನ್ನು ಕಳೆದುಕೊಂಡಿದ್ದು ರಾಜ್ಯಕ್ಕೆ ನಷ್ಟವಾಗಿದೆ. ಇಂತಹ ದಕ್ಷ ಅಧಿಕಾರಿಗಳ ಅವಶ್ಯಕತೆ ಇತ್ತು ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.