ಹಟ್ಟಿಚಿನ್ನದಗಣಿ: ಪಾಲಕರು ಖಾಸಗಿ ಶಾಲೆಗಳ ಮೇಲಿನ ವ್ಯಾಮೋಹ ಬಿಟ್ಟು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಶಿಕ್ಷಕ ಬಸವರಾಜ ಹೇಳಿದರು.
ಪಟ್ಟಣದ ಕ್ಯಾಂಪ್ ಪ್ರದೇಶದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಪ್ರಾರಂಭೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಪುಷ್ಪ ನೀಡಿ ಬರಮಾಡಿಕೊಂಡು ಮಾತನಾಡಿದರು.
ಸರ್ಕಾರ ಪಾಠದ ಜತೆಗೆ ಉಚಿತ ಪಠ್ಯಪುಸ್ತಕ, ಸೈಕಲ್, ಮೊಟ್ಟೆ, ಬಿಸಿಯೂಟದಂತಹ ಯೋಜನೆಗಳನ್ನು ಜಾರಿಗೆ ತಂದಿದೆ. ಮಕ್ಕಳು ಅವುಗಳ ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಇತರರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.