ADVERTISEMENT

ರಾಯಚೂರು: ವಕ್ಫ್ ಆಸ್ತಿ ರಕ್ಷಣೆಗೆ ಎಸ್‌ಡಿಪಿಐ ಒತ್ತಾಯ

​ಪ್ರಜಾವಾಣಿ ವಾರ್ತೆ
Published 16 ಜೂನ್ 2025, 13:03 IST
Last Updated 16 ಜೂನ್ 2025, 13:03 IST
ರಾಯಚೂರಿನಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕದ ಪದಾಧಿಕಾರಿಗಳು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಸೈಯದ್ ಶಾ ಅಲಿ ಅಲ್ ಹುಸೇನಿ ಅವರಿಗೆ ಮನವಿ ಸಲ್ಲಿಸಿದರು
ರಾಯಚೂರಿನಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕದ ಪದಾಧಿಕಾರಿಗಳು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಸೈಯದ್ ಶಾ ಅಲಿ ಅಲ್ ಹುಸೇನಿ ಅವರಿಗೆ ಮನವಿ ಸಲ್ಲಿಸಿದರು   

ರಾಯಚೂರು: ನಗರದ ಸರ್ವೆ ನಂಬರ್ 1179/1 ರ ಸೈಯದ್ ಶಾ ಕರಿಮುಲ್ಲಾ ಖಾದ್ರಿ ದರ್ಗಾದ ಆಸ್ತಿ ರಕ್ಷಣೆ ಮಾಡುವಲ್ಲಿ ಜಿಲ್ಲಾ ವಕ್ಫ್ ಬೋರ್ಡ್ ವಿಫಲವಾಗಿದ್ದು, ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾ ಘಟಕದ ಪದಾಧಿಕಾರಿಗಳು ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಸೈಯದ್ ಶಾ ಅಲಿ ಅಲ್ ಹುಸೇನಿ ಅವರಿಗೆ ಮನವಿ ಸಲ್ಲಿಸಿದರು.

ಜಿಲ್ಲಾ ವಕ್ಫ್ ಮಂಡಳಿ ವಕ್ಫ್ ಆಸ್ತಿ ಒತ್ತುವರಿ ಮಾಡುಕೊಂಡ ಬಗ್ಗೆ ಪಕ್ಷದಿಂದ ಮನವಿ ಸಲ್ಲಿಸಿ ಒತ್ತಾಯಿಸಿದರೂ ಕ್ರಮ ಕೈಗೊಂಡಿಲ್ಲ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ವಕ್ಫ್ ಆಸ್ತಿಗಳನ್ನು ರಕ್ಷಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಎಸ್‌ಡಿಪಿಐ ರಾಜ್ಯ ನಾಯಕ ಅಕ್ಬರ್ ಹುಸೇನ್ ನಾಗುಂಡಿ, ಜಿಲ್ಲಾ ಘಟಕದ ಉಪಾಧ್ಯಕ್ಷ ಮತೀನ್ ಅನ್ಸಾರಿ, ತೌಸೀಫ್ ಅಹ್ಮದ್, ಜಿಲ್ಲಾ ಕಾರ್ಯದರ್ಶಿ ಶೇಖ್ ದಾವೂದ್, ಜಿಲ್ಲಾ ನಾಯಕರಾದ ಸೈಯದ್ ಅಬ್ದುಲ್ ಅಜೀಜ್, ಸೈಯದ್ ಇರ್ಫಾನ್, ಹಫೀಜ್ ಮೆಹಮೂದ್, ಸೈಯದ್ ಫರೀದುಲ್ಲಾ ಯಮಾನಿ, ಮುಹಮ್ಮದ್ ಶಾಫಿ, ಶೇಖ್ ಉಜೈರ್, ನಗರ ಅಧ್ಯಕ್ಷ ಸಾದಿಕ್ ಬೇಗ್ ಹಾಗೂ ರಫಿಯುದ್ದೀನ್ ಉಪಸ್ಥಿತರಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.