ADVERTISEMENT

ಶಕ್ತಿನಗರ | ರಸ್ತೆ ಮಧ್ಯೆ ಕೊಳಚೆ ನೀರು: ಗ್ರಾಮಸ್ಥರ ಪರದಾಟ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 14:33 IST
Last Updated 3 ಆಗಸ್ಟ್ 2024, 14:33 IST
ಶಕ್ತಿನಗರ ಸಮೀಪದ ಮನ್ಸಲಾಪುರದಲ್ಲಿ ರಸ್ತೆಯ ಮೇಲೆ ಹರಿಯುತ್ತಿರುವ ಕೊಳಚೆ ನೀರಿನಲ್ಲೇ ಹೊರಟ ಮಕ್ಕಳು
ಶಕ್ತಿನಗರ ಸಮೀಪದ ಮನ್ಸಲಾಪುರದಲ್ಲಿ ರಸ್ತೆಯ ಮೇಲೆ ಹರಿಯುತ್ತಿರುವ ಕೊಳಚೆ ನೀರಿನಲ್ಲೇ ಹೊರಟ ಮಕ್ಕಳು   

ಶಕ್ತಿನಗರ: ಇಲ್ಲಿನ ಮನ್ಸಲಾಪುರದಲ್ಲಿ ರಸ್ತೆಯ ಮೇಲೆ ಚರಂಡಿ ನೀರು ಹರಿಯುತ್ತಿರುವ ಪರಿಣಾಮ ಇಲ್ಲಿನ ನಿವಾಸಿಗಳ ಸಂಚಾರಕ್ಕೆ ತೊಂದರೆಯಾಗಿದೆ ಎಂದು ರೈತ ಸೇನೆಯ ಜಿಲ್ಲಾಧ್ಯಕ್ಷ ಇಂದ್ರಜಿತ್ ಯಾದವ್ ತಿಳಿಸಿದ್ದಾರೆ.

ಕೊಳಚೆ ನೀರು ರಸ್ತೆಯಲ್ಲಿ ಹರಿಯುತ್ತಿರುವ ಪರಿಣಾಮ ಗ್ರಾಮಸ್ಥರು ಸಾಂಕ್ರಾಮಿಕ ರೋಗದ ಭೀತಿ ಎದುರಿಸುತ್ತಿದ್ದಾರೆ. ಹಾಗಾಗಿ ಚರಂಡಿಯನ್ನು ಸ್ವಚ್ಛಗೊಳಿಸಬೇಕು. ಕೊಳಚೆ ನೀರು ಚರಂಡಿಯಲ್ಲಿ ಹರಿಯುವ ನಿಟ್ಟಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಡೆಂಗಿ ಪ್ರಕರಣ ನಿಯಂತ್ರಿಸಲು ಎಲ್ಲಾ ಗ್ರಾಮ ಪಂಚಾಯಿತಿಗಳು ಮುನ್ನೆಚ್ಚರಿಕೆ ವಹಿಸುವಂತೆ ಸರ್ಕಾರ ನಿರ್ದೇಶನ ನೀಡಿದೆ.  ಆದರೂ ಕೂಡ ಇಂದಿನವರೆಗೂ ಮನ್ಸಲಾಪುರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಇದರ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ನಿರ್ಲಕ್ಷ್ಯ ಮುಂದುವರೆದರೆ ಮುಂದಾಗುವ ಅನಾಹುತಗಳಿಗೆ ಸಂಬಂಧಿಸಿದವರು ಹೊಣೆಗಾರರಾಗಿರುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.