ADVERTISEMENT

ಸಿಂಧನೂರು ಅಪಘಾತ: 16ಕ್ಕೂ ಅಧಿಕ ಜನರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 3 ಜೂನ್ 2023, 14:03 IST
Last Updated 3 ಜೂನ್ 2023, 14:03 IST
ಸಿಂಧನೂರು ತಾಲ್ಲೂಕಿನ ಗೊರೇಬಾಳ ಗ್ರಾಮದ ಬಳಿ ಕಾರು-ಬುಲೆರೋ ವಾಹನ ನೆಡೆದ ಅಪಘಾತ
ಸಿಂಧನೂರು ತಾಲ್ಲೂಕಿನ ಗೊರೇಬಾಳ ಗ್ರಾಮದ ಬಳಿ ಕಾರು-ಬುಲೆರೋ ವಾಹನ ನೆಡೆದ ಅಪಘಾತ   

ಸಿಂಧನೂರು: ಕಾರು ಮತ್ತು ಸರಕು ಸಾಗಣೆ ವಾಹನಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ 16ಕ್ಕೂ ಅಧಿಕ ಜನ ಗಾಯಗೊಂಡಿದ್ದು ನಾಲ್ವರಿಗೆ ಗಂಭೀರ ಸ್ವರೂಪದ ಗಾಯಗಳಾದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.

ತಾಲ್ಲೂಕಿನ ಕಣ್ಣೂರು ಗ್ರಾಮದ 15ಕ್ಕೂ ಹೆಚ್ಚು ಜನರು ಗೂಡ್ಸ್ ವಾಹನದಲ್ಲಿ ಅಂಜನಾದ್ರಿ ಬೆಟ್ಟಕ್ಕೆ ತೆರಳುತ್ತಿದ್ದರು. ಕಾರಿನಲ್ಲಿ ತಂದೆ-ತಾಯಿ ಹಾಗೂ ಮೂವರು ಮಕ್ಕಳು ಹೊಸಪೇಟೆಯಿಂದ ಹೈದರಾಬಾದ್‍ಗೆ ತೆರಳುತ್ತಿದ್ದರು. ಗೊರೇಬಾಳ ಗ್ರಾಮದ ಸಮೀಪದಲ್ಲಿ ನಡುವೆ ಡಿಕ್ಕಿ ಸಂಭವಿಸಿದ್ದು ಸಕರು ಸಾಗಣೆ ವಾಹನ ಪಕ್ಕದ ಗದ್ದೆಗೆ ಪಲ್ಟಿ ಹೊಡೆದಿದೆ.

ಬುಲೇರಾ ವಾಹನದಲ್ಲಿದ್ದ 15 ಜನರಲ್ಲಿ ಓರ್ವ ಮಹಿಳೆ ಶಾಂತಾಬಾಯಿ (36) ತಲೆಗೆ, ಓರ್ವ ಬಾಲಕ ಪ್ರಜ್ವಲ್ ಸಿಂಗ್ (15) ಮುಖ ಮತ್ತು ತಲೆಗೆ ಹಾಗೂ ಕಾರನಲ್ಲಿದ್ದ ಓರ್ವ ಬಾಲಕಿ ಅಲ್ಫಿಯಾ ಖಾನ್ (8) ತಲೆಗೆ ಗಂಭೀರ ಗಾಯಗಳಾಗಿವೆ. ಈ ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ಓಪಿಡಿಗೆ ರವಾನಿಸಲಾಗಿದೆ.

ಇನ್ನುಳಿದ ಗಾಯಾಳು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಯ್ಯನಗೌಡ ನೇತೃತ್ವದಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಎಲ್ಲ ಗಾಯಾಳುಗಳಿಗೆ ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾದರು. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.