ADVERTISEMENT

ಹಕ್ಕುಪತ್ರಕ್ಕಾಗಿ ಕೊಳೆಗೇರಿ ನಿವಾಸಿಗಳ ಹಕ್ಕೊತ್ತಾಯ

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ಸಂಜೆವರೆಗೂ ಕಾದ ಪ್ರತಿಭಟನಾಕಾರರು

​ಪ್ರಜಾವಾಣಿ ವಾರ್ತೆ
Published 19 ಮೇ 2022, 15:52 IST
Last Updated 19 ಮೇ 2022, 15:52 IST
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸ್ಲಂ ಪ್ರದೇಶದ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲು ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಕೊಳೆಗೇರಿ ನಿವಾಸಿಗಳು ಗುರುವಾರ ಪ್ರತಿಭಟನೆ ನಡೆಸಿದರು.
ರಾಯಚೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಸ್ಲಂ ಪ್ರದೇಶದ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಲು ಆಗ್ರಹಿಸಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಕೊಳೆಗೇರಿ ನಿವಾಸಿಗಳು ಗುರುವಾರ ಪ್ರತಿಭಟನೆ ನಡೆಸಿದರು.   

ರಾಯಚೂರು: ಅಘೋಷಿತ ಕೊಳೆಗೇರಿ ಪ್ರದೇಶಗಳನ್ನು ಘೋಷಣೆ ಮಾಡಬೇಕು. ಈಗಾಗಲೇ ಘೋಷಿಸಿರುವ ಕೊಳೆಗೇರಿ ನಿವಾಸಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಬೇಕು ಎಂದು ಒತ್ತಾಯಿಸಿ ಸ್ಲಂ ಜನರ ಕ್ರಿಯಾ ವೇದಿಕೆ ಹಾಗೂ ದಲಿತ ಸಮರಸೇನೆಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ನಡೆಸಲಾಯಿತು.

ಜಿಲ್ಲೆಯ ಮಾನ್ವಿ ಪಟ್ಟಣದ ಅಂಬೇಡ್ಕರ್‌ ನಗರದ ಸ್ಲಂ ಸರ್ವೆ ನಂಬರ್ 613, 617 / 1, ಲಿಂಗಸೂಗೂರು ತಾಲ್ಲೂಕಿನ ವಾಡ್ ನಂಬರ್ 15 ರ ಪಿಂಚಣಿಪುರದಲ್ಲಿ ಅನೇಕ ಬಡ, ಹಿಂದುಳಿದ ಪರಿಶಿಷ್ಟರು ವಾಸವಾಗಿದ್ದು ಸ್ಲಂ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಆದರೆ ಮೂಲಸೌಕರ್ಯ ಕಲ್ಪಿಸಿಲ್ಲ.

ADVERTISEMENT

ಲಿಂಗಸೂಗೂರು ತಾಲ್ಲೂಕಿನ ವಿವಿಧ ಪ್ರದೇಶಗಳಲ್ಲಿ ವಾಸಿಸುತ್ತಿರುವ ಮಂಗಳಮುಖಿಯರು ಹೆಚ್‌ಐವಿ ಸೋಂಕಿತರು, ವಿಧವೆಯರು, ದೇವದಾಸಿಯರು, ಬೀದಿ ವ್ಯಾಪಾರಿಗಳು, ನಿರ್ಗತಿಕರು, ಅಂಗವಿಕಲರು ವಾಸವಾಗಿದ್ದು ವಿಶೇಷ ವರ್ಗದ ಅಡಿಯಲ್ಲಿ ಭೂಮಿ ಮಂಜೂರು ಮಾಡಿ ವಸತಿಗಾಗಿ ಕಾಯ್ದಿರಿಸಿ ಬಗ್ಗೆ ಸೌಲಭ್ಯ ಕೇಳಲು ಹೋದರೆ ತಹಶೀಲ್ದಾರರು ನಿಂದಿಸಿದ್ದಾರೆ. ಕೂಡಲೇ ತಹಶೀಲ್ದಾರರ ವಿರುದ್ಧ ಕ್ರಮಕೈಗೊಳ್ಳಬೇಕು ಮತ್ತು ವಿಶೇಷ ವರ್ಗದಲ್ಲಿ ಸಿಗಬೇಕಾದ ಸೌಲಭ್ಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧಿಕಾರಿಯು ಖುದ್ದಾಗಿ ಮನವಿ ಸ್ವೀಕರಿಸಬೇಕು. ಸಂಕಷ್ಟದಲ್ಲಿರುವ ಜನರ ಅಳಲು ಆಲಿಸಬೇಕು ಎಂದು ಪ್ರತಿಭಟನಾಕಾರರು ಸಂಜೆವರೆಗೂ ಜಿಲ್ಲಾಧಿಕಾರಿ ಆವರಣ ಪ್ರವೇಶದ್ವಾರದ ಎದುರು ಧರಣಿ ನಡೆಸಿದರು. ಸ್ಥಳದಲ್ಲೇ ಊಟ ಮಾಡಿ, ಧರಣಿ ಮುಂದುವರಿಸಿದ್ದರು.

ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಎಂ.ಆರ್.ಭೇರಿ, ಅಂಬಣ್ಣ ಅರೋಲಿ, ಜನಾರ್ದನ ಹಳ್ಳಿಬೆಂಚಿ, ಕೆ.ಪಿ.ಅನಿಲಕುಮಾರ, ರಾಜಪ್ಪ ಸಿರವಾರ, ಹೇಮರಾಜ ಅಸ್ಕಿಹಾಳ ಮತ್ತಿತರರು ನೇತೃತ್ವ ವಹಿಸಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.