ADVERTISEMENT

ನೇರ ಪೋನ್ ಇನ್ ಕಾರ್ಯಕ್ರಮದಲ್ಲಿ ದೂರು ಸಲ್ಲಿಸಿ: ಎಸ್‌ಪಿ

​ಪ್ರಜಾವಾಣಿ ವಾರ್ತೆ
Published 1 ಜುಲೈ 2019, 13:27 IST
Last Updated 1 ಜುಲೈ 2019, 13:27 IST
ರಾಯಚೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಅವರು ಸೋಮವಾರ ನೇರ್ ಫೋನ್‌ ಇನ್‌ ಕಾರ್ಯಕ್ರಮದ ಮೂಲಕ ಸಾರ್ಜಜನಿಕರ ಅಹವಾಲುಗಳನ್ನು ದಾಖಲಿಸಿಕೊಂಡರು
ರಾಯಚೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ ಅವರು ಸೋಮವಾರ ನೇರ್ ಫೋನ್‌ ಇನ್‌ ಕಾರ್ಯಕ್ರಮದ ಮೂಲಕ ಸಾರ್ಜಜನಿಕರ ಅಹವಾಲುಗಳನ್ನು ದಾಖಲಿಸಿಕೊಂಡರು   

ರಾಯಚೂರು:ಸಾರ್ವಜನಿಕರು ತಮ್ಮ ಸಮಸ್ಯೆಗಳಿದ್ದರೆ ಪ್ರತಿ ತಿಂಗಳು 1 ನೇ ದಿನಾಂಕದಂದು ನಡೆಯುವ ನೇರ ಪೋನ್ ಇನ್ ಕಾರ್ಯಕ್ರಮದಡಿ ದೂರು ಸಲ್ಲಿಸಬಹುದು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಸಿ.ಬಿ ವೇದಮೂರ್ತಿ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ 12 ರಿಂದ 1 ಗಂಟೆವರೆಗೆ ನಡೆದ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಿಲ್ಲೆಯ ವಿವಿಧ ಭಾಗಗಳಿಂದ ಒಂಭತ್ತು ಜನ ಸಾರ್ವಜನಿಕರು ಕರೆ ಮಾಡಿ ಅಹವಾಲುಗಳನ್ನು ತಿಳಿಸಿದರು. ಸಿರವಾರ ಗ್ರಾಮದಲ್ಲಿ ಅಕ್ರಮ ಚಟುವಟಿಕೆಗಳಾದ ಮಟಕಾ, ಜೂಟಾಟ ನಿಯಂತ್ರಿಸುವ ಬಗ್ಗೆ, ಸ್ಟೇಷನ್ ಏರಿಯಾದಲ್ಲಿ ಮನೆ ಕಟ್ಟಿಸಲು ಸಂಬಂಧಿಗಳು ತೊಂದರೆ ಮಾಡುತ್ತಿರುವ ಬಗ್ಗೆ, ದೇವದುರ್ಗ ಪಟ್ಟಣದಲ್ಲಿ ಕ್ರಿಕೆಟ್ ಬೆಟ್ಟಿಂಗ್ ವಿರುದ್ಧ ಕಾನೂನು ಕ್ರಮ ಜರುಗಿಸುವ ಬಗ್ಗೆ, ಕವಿತಾಳ ಗ್ರಾಮದಲ್ಲಿ ರಸ್ತೆ ಅಗಲೀಕರಣ ಬಗ್ಗೆ, ರಾಯ ಚೂರು ಪಟ್ಟಣದ ಕಾಯಿಪಲ್ಲೆ ಮಾರ್ಕೆಟ್‌ನಲ್ಲಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಆಗುತ್ತಿರುವ ಬಗ್ಗೆ, ಕೆರೆಬು ದೂರು ಗ್ರಾಮದಲ್ಲಿ ಚರಂಡಿ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ, ಸಿಂಧನೂರು ತಾಲೂಕಿನ ತೋಳದಿನ್ನಿ ಗ್ರಾಮದಲ್ಲಿ ಜಮೀನು ವಿವಾದ ಬಗ್ಗೆ ಮತ್ತು ಸಾದಾಪೂರ ಗ್ರಾಮದಲ್ಲಿ ಭಟ್ಟಿ ಸಾರಾಯಿ ತಯಾರಿಸುವಿಕೆ ಅಹವಾಲುಗಳು ಸಲ್ಲಿಕೆಯಾದವು.

ADVERTISEMENT

ನಿಯಮಾನುಸಾರ ಕಾನೂನು ಕ್ರಮ ಜರುಗಿಸಿ ವರದಿ ಸಲ್ಲಿಸುವಂತೆ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕೂಡಲೇ ಸೂಚಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.