ADVERTISEMENT

ಮಂತ್ರಾಲಯ: ₹13 ಕೋಟಿ ವೆಚ್ಚದ ಸುಸಜ್ಜಿತ ಸ್ನಾನಘಟ್ಟ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 6:43 IST
Last Updated 20 ನವೆಂಬರ್ 2020, 6:43 IST
ತುಂಗಭದ್ರಾ ನದಿ
ತುಂಗಭದ್ರಾ ನದಿ   

ರಾಯಚೂರು: ಮಂತ್ರಾಲಯದ ತುಂಗಭದ್ರಾ ನದಿತೀರದಲ್ಲಿ ₹13 ಕೋಟಿ ವೆಚ್ಚದಲ್ಲಿ ಸುಸಜ್ಜಿತವಾದ ಸ್ನಾನಘಟ್ಟ ನಿರ್ಮಾಣಕ್ಕೆ ಯೋಜನೆ ಮಾಡಿಕೊಳ್ಳಲಾಗಿದ್ದು, ಒಂದು ವರ್ಷದೊಳಗಾಗಿ ಕಾಮಗಾರಿ ಪೂರ್ಣವಾಗಲಿದೆ ಎಂದು ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮಿ ಹೇಳಿದರು.

ತುಂಗಭದ್ರಾ ಪುಷ್ಕರ ಪೂಜೆ ನೆರವೇರಿಸುವ ಪೂರ್ವ ನದಿ ತೀರದಲ್ಲಿ ನೀಡಿದ ಅನುಗ್ರಹ ಸಂದೇಶದಲ್ಲಿ ಉಲ್ಲೇಖಿಸಿದರು.

ಇನ್ಫೋಸಿಸ್ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ ದಂಪತಿ ಆರ್ಥಿಕ ನೆರವು ಒದಗಿಸುತ್ತಿದ್ದಾರೆ ಎಂದರು.

ADVERTISEMENT

ಪುಷ್ಕರದ ಆರಂಭದಲ್ಲಿಯೇ ಕಾಮಗಾರಿ ಪೂರ್ಣ ಮಾಡಲು ಉದ್ದೇಶಿಸಲಾಗಿತ್ತು. ಕೋವಿಡ್ ಇರುವ ಕಾರಣ ಕೆಲಸ ತಡೆಹಿಡಿಯಲಾಗಿದೆ. ಸುತ್ತಮುತ್ತ ಎಲ್ಲಿಯೂ ಕಾಣಸಿಗದ ವ್ಯವಸ್ಥಿತ ಸ್ನಾನಘಟ್ಟ ಇದಾಗಲಿದೆ ಎಂದು ತಿಳಿಸಿದರು.

ನಿಯಮಗಳಿಗೆ ಒಳಪಟ್ಟು ಎಲ್ಲರೂ ಪುಷ್ಕರ ಸ್ನಾನ ಮಾಡಿ ಪುಣೀತರಾಗಬೇಕು ಎಂದು ತಿಳಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.