ಸಿಂಧನೂರು: ‘ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಸಮ್ಮೇಳನವನ್ನು ಆ.30, 31 ಮತ್ತು ಸೆ.1ರಂದು ಸಿಂಧನೂರಿನಲ್ಲಿ ಹಮ್ಮಿಕೊಳ್ಳಲು ರಾಜ್ಯ ಸಮಿತಿ ತೀರ್ಮಾನಿಸಿದೆ’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ಶಕುಂತಲಾ ಪಾಟೀಲ ತಿಳಿಸಿದ್ದಾರೆ.
ಶನಿವಾರ ಹೇಳಿಕೆ ನೀಡಿದ ಅವರು,‘ರಾಜ್ಯ ಸಮ್ಮೇಳನದ ತಯಾರಿಗಾಗಿ ಜೂ.25ರಂದು ಬೆಳಿಗ್ಗೆ 11ಕ್ಕೆ ನಗರದ ಎಪಿಎಂಸಿ ಸಮುದಾಯ ಭವನದಲ್ಲಿ ಸಭೆ ಕರೆಯಲಾಗಿದೆ. ಕಾರಣ ಮಹಿಳಾ ಸಂಘಟನೆಗಳು ಹಾಗೂ ವಿವಿಧ ಜನಪರ ಸಂಘಟನೆಗಳ ಮುಖಂಡರು ಸಭೆಗೆ ಆಗಮಿಸಿ ಸಲಹೆ ನೀಡಬೇಕು’ ಎಂದು ಅವರು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.