ADVERTISEMENT

ತುರ್ವಿಹಾಳ: ಬೀದಿನಾಟಕ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2021, 11:57 IST
Last Updated 1 ನವೆಂಬರ್ 2021, 11:57 IST
ತುರ್ವಿಹಾಳ ಪಟ್ಟಣದಲ್ಲಿ ಸಿಂಧನೂರಿನ ಸಿಂಚನ ಸಾಂಸ್ಕೃತಿಕ ಕಲಾ ಸಂಘದ ಸದಸ್ಯರು ಬೀದಿನಾಟಕ ಪ್ರದರ್ಶಿಸಿದರು
ತುರ್ವಿಹಾಳ ಪಟ್ಟಣದಲ್ಲಿ ಸಿಂಧನೂರಿನ ಸಿಂಚನ ಸಾಂಸ್ಕೃತಿಕ ಕಲಾ ಸಂಘದ ಸದಸ್ಯರು ಬೀದಿನಾಟಕ ಪ್ರದರ್ಶಿಸಿದರು   

ತುರ್ವಿಹಾಳ: ಸಮಾಜ ಕಲ್ಯಾಣ ಇಲಾಖೆ ಹಾಗೂ ಸಿಂಧನೂರಿನ ಸಿಂಚನ ಸಾಂಸ್ಕೃತಿಕ ಕಲಾ ಸಂಘದ ಸಹಯೋಗದಲ್ಲಿ ಬೀದಿನಾಟಕ ಪ್ರದರ್ಶಿಸುವ ಮೂಲಕ ಅಸ್ಪೃಶ್ಯತೆಯ ಕುರಿತು ಜಾಗೃತಿ ಮೂಡಿಸಲಾಯಿತು.

ಪಟ್ಟಣದ ಸಂತೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕಿ ವಿಜಯಲಕ್ಷ್ಮಿ ತಮಟೆ ಬಾರಿಸುವ ಮೂಲಕ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು,‘ಜಾತಿ ಪದ್ಧತಿಯನ್ನು ಕೈಬಿಟ್ಟು ಎಲ್ಲರೂ ಸಮಾನವಾಗಿ ಜೀವನ ಸಾಗಿಸಬೇಕು. ಅಸ್ಪೃಶ್ಯತೆ ಎನ್ನುವುದು ಸಮಾಜಕ್ಕೆ ಅಂಟಿದ ದೊಡ್ಡ ಪಿಡುಗು. ಅದನ್ನು ನಿರ್ಮೂಲನೆ ಮಾಡಲು ನಾವೆಲ್ಲರೂ ಸೌಹಾರ್ದದಿಂದ ಬದುಕಬೇಕು. ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ’ ಎಂದು ಹೇಳಿದರು

ADVERTISEMENT

ಕಲಾ ತಂಡದ ಮೌಲಪ್ಪ ಮಾಡಸಿರಿವಾರ, ರಮೇಶ, ಶಿವಪುತ್ರಪ್ಪ ಹಾಗೂ ಸಾರ್ವಜನಿಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.