ರಾಯಚೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕಿದ್ದ ಪುತ್ರನನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಲು ಬೈಕ್ನಲ್ಲಿ ತೆರಳುವಾಗ ರಸ್ತೆಗೆ ನುಗ್ಗಿದ ಎಮ್ಮೆಗೆ ಡಿಕ್ಕಿ ಹೊಡೆದಿದ್ದರಿಂದ ಶಿಕ್ಷಕ ಮೃತಪಟ್ಟಿದ್ದಾರೆ.
ಗಾಯಗೊಂಡಿರುವ ಪುತ್ರನನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಿಲ್ಲೆಯ ದೇವದುರ್ಗ ತಾಲ್ಲೂಕು ಸಮೀಪದ ಮಿಯ್ಯಾಪುರ ಕ್ರಾಸ್ನಲ್ಲಿ ಗುರುವಾರ ಈ ಘಟನೆ ನಡೆದಿದೆ.
ಸುಂಕೇಶ್ವರಹಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆ ಶಿಕ್ಷಕ ನಾಗರೆಡ್ಡಿ (57) ಮೃತಪಟ್ಟಿದ್ದಾರೆ. ಪುತ್ರ ವಿಶ್ವನಾಥನಿಗೆ ಗಾಯಗಳಾಗಿವೆ. ದೇವದುರ್ಗ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.