ADVERTISEMENT

ಸಿಂಧನೂರು | ನೇಣು ಹಾಕಿಕೊಂಡು ಶಿಕ್ಷಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2022, 6:10 IST
Last Updated 22 ನವೆಂಬರ್ 2022, 6:10 IST
ಬಾಲಪ್ಪ
ಬಾಲಪ್ಪ   

ಸಿಂಧನೂರು: ಇಲ್ಲಿನ ಗಂಗಾನಗರದಲ್ಲಿ ಭಾನುವಾರ ಶಿಕ್ಷಕ ಬಾಲಪ್ಪ (43) ಎಂಬುದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಅರಿಂದ್ರಾಳ ಗ್ರಾಮದ ಅವರು ಕುರ್ಡಿ ಸಿಆರ್‌ಪಿ ಆಗಿದ್ದರು.

‘ಹೃದ್ರೋಗ ಮತ್ತು ವೈಯಕ್ತಿಕ ಸಮಸ್ಯೆಗಳಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪತ್ನಿ ತಿಳಿಸಿದ್ದಾರೆ. ಪತ್ನಿ ಮತ್ತು ಇಬ್ಬರು ಮಕ್ಕಳು ಊರಿಗೆ ಹೋಗಿದ್ದ ವೇಳೆ ಘಟನೆ ನಡೆದಿದೆ. ಮನೆಯ ಮಾಲೀಕರು ಬಾಗಿಲು ತೆರೆದು ನೋಡಿದಾಗ, ಆತ್ಮಹತ್ಯೆ ವಿಷಯ ಗೊತ್ತಾಗಿದೆ’ ಎಂದು ನಗರ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ಮೃತದೇಹವನ್ನು ತಾಲ್ಲೂಕು ಸಾರ್ವ ಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬಸ್ಥರಿಗೆ ಒಪ್ಪಿಸ ಲಾಯಿತು ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.