ಲಿಂಗಸುಗೂರು: ತಾಲ್ಲೂಕಿನ ಹುನಕುಂಟಿದಿಂದ ನಾಗರಹಾಳ ಗ್ರಾಮದವರೆಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವಂತೆ ಗುರುವಾರ ಮಕ್ಕಳ ನಡೆಸಿದ ಪ್ರತಿಭಟನೆಗೆ ಮಣಿದ ಸಾರಿಗೆ ಘಟಕ ಅಧಿಕಾರಿಗಳು ಬಸ್ ಸೌಕರ್ಯ ಕಲ್ಪಿಸಿದರು.
ಗುರುವಾರ ಬೆಳಿಗ್ಗೆ ಭೂಪುರ ಗ್ರಾಮದಲ್ಲಿ ಶಾಲಾ ಕಾಲೇಜು ಮಕ್ಕಳು ಖೈರವಾಡಗಿ, ನಾಗರಹಾಳ, ಮಾವಿನಭಾವಿ ಶಾಲಾ ಕಾಲೇಜಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಸಂಚರಿಸುತ್ತಿದ್ದೇವೆ. ಒಂದೇ ಬಸ್ ಬರುವುದರಿಂದ ಶಾಲಾ ಕಾಲೇಜಿಗೆ ಹೋಗಲು ಆಗದಂತ ಸ್ಥಿತಿ ನಿರ್ಮಾಣಗೊಂಡಿದ್ದು ಹೆಚ್ಚುವರಿ ಬಸ್ ಬಿಡುವಂತೆ ಆಗ್ರಹ ಪಡಿಸಿದ್ದರು.
ಈ ಮೊದಲು ಹಲವು ಬಾರಿ ಸಾರಿಗೆ ಘಟಕಕ್ಕೆ ಮನವಿ ಸಲ್ಲಿಸುತ್ತ ಬಂದಿದ್ದರು ಸ್ಪಂದಿಸದಿರುವುದನ್ನು ವಿರೋಧಿಸಿ ಪ್ರತಿಭಟನೆ ಆರಂಭಗೊಂಡಿತ್ತು. ವಿಷಯ ತಿಳಿದ ಸಾರಿಗೆ ಘಟಕ ವ್ಯವಸ್ಥಾಪಕ ರಾಹುಲ್ ಹೊನಸೂರೆ ತಕ್ಷಣ ಹೆಚ್ಚುವರಿ ಬಸ್ ಕಳುಹಿಸುತ್ತಿದ್ದಂತೆ ಗ್ರಾಮಸ್ಥರು, ಮಕ್ಕಳು ಸಾರಿಗೆ ಸಿಬ್ಬಂದಿಗೆ ಸನ್ಮಾನಿಸಿದರು ಹಾಗೂ ಸಿಹಿ ಹಂಚಿ ಸಂಭ್ರಮಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.