ADVERTISEMENT

ಹೊತ್ತಿ ಉರಿದ ಭತ್ತದ ಹುಲ್ಲು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2020, 10:26 IST
Last Updated 25 ಏಪ್ರಿಲ್ 2020, 10:26 IST
   

ರಾಯಚೂರು: ಜಮೀನಿನಿಂದ ಟ್ರ್ಯಾಕ್ಟರ್‌ ಮೂಲಕ ಭತ್ತದ ಹುಲ್ಲು ಸಾಗಿಸುವಾಗ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಟ್ರ್ಯಾಕ್ಟರ್‌ ಸಹಿತ ಸಂಪೂರ್ಣ ಹೊತ್ತಿ ಊರಿದ ಘಟನೆ ಜಿಲ್ಲೆಯ ಮಾನ್ವಿ ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ನಡೆದಿದೆ.

ಟ್ರ್ಯಾಕ್ಟರ್‌ ಮಾಲೀಕ ರೈತ ಚನ್ನಬಸವ ಸದಾಶಿವಪ್ಪ ಹೂಗಾರ್‌ ನಷ್ಟಕ್ಕೀಡಾಗಿದ್ದಾರೆ. ಕುಟುಂಬಕ್ಕೆ ಆರ್ಥಿಕವಾಗಿ ಆಧಾರವಾಗಿದ್ದ ಟ್ರ್ಯಾಕ್ಟರ್‌ ಸುಟ್ಟುಹೋಗಿದ್ದರಿಂದ ರೈತ ಚಿಂತೆಯಲ್ಲಿ ಮುಳುಗಿದ್ದಾರೆ.

ಜಿಲ್ಲಾಡಳಿತವು ನೆರವು ಒದಗಿಸಬೇಕು ಎಂದು ಮನವಿ ಮಾಡಲಾಗಿದೆ. ಮಾನ್ವಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.