ರಾಯಚೂರು: ಮಾನ್ವಿ ಪಟ್ಟಣದ ಜಮೀನು ಸರ್ವೆ ನಂಬರ್ 421/*/ 4ರ ಸರ್ಕಾರಿ ಹಣ್ಣಿನ ತೋಟದ ಮರಗಳನ್ನು ಕಡಿದು ಹಾಕಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಭಾರತೀಯ ಸೇವಾ ಸಮಿತಿಯ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತ ಕಚೇರಿಗೆ ಮನವಿ ಸಲ್ಲಿಸಿದರು. ಕೂಡಲೇ ಇದನ್ನು ಗಂಭೀರವಾಗಿ ಪರಿಗಣಿಸಿ ಅಧಿಕಾರಿಗಳ ವಿರುದ್ಧ ಕೈಗೊಳ್ಳಬೇಕು ಹಾಗೂ ಗಿಡಗಳನ್ನು ತಕ್ಷಣವೇ ನೆಡಲು ಸೂಚಿಸಬೇಕು ಎಂದು ಒತ್ತಾಯಿಸಿದರು. ಈ ವೇಳೆ ರಾಜ್ಯ ರಾಜ್ಯಾದ್ಯಕ್ಷ ಎಚ್.ಎಂ ಬಾಬು, ಶ್ರೀನಿವಾಸ, ಶಿವಕುಮಾರ ಜಂಗ್ಲಿ, ನವೀನ ಕುಮಾರ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.