ADVERTISEMENT

ರಾಯಚೂರು | ಕಾರು -ಬಸ್ ಡಿಕ್ಕಿ, ಸ್ಥಳದಲ್ಲೇ ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2024, 8:57 IST
Last Updated 18 ಫೆಬ್ರುವರಿ 2024, 8:57 IST
ಅಪಘಾತ–ಸಾಂಕೇತಿಕ ಚಿತ್ರ
ಅಪಘಾತ–ಸಾಂಕೇತಿಕ ಚಿತ್ರ   

ರಾಯಚೂರು: ತಾಲ್ಲೂಕಿನ ಕಸ್ಪೆಕ್ಯಾಂಪ್‌ ಸಮೀಪ ಕಾರು ಹಾಗೂ ಖಾಸಗಿ ಬಸ್‌ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಐವರು ಗಾಯಗೊಂಡಿದ್ದಾರೆ.

ಮೃತರನ್ನು ಮಾರಿಯಾ ಗೀತಾ (38) ಹಾಗೂ ಅಮಲ್ ಪಾಲ್ (64) ಎಂದು ಗುರುತಿಸಲಾಘಿದೆ. ಹೈದರಾಬಾದ್‌ನಿಂದ ಸಿಂಧನೂರಿಗೆ ಹೊರಟಿದ್ದ ಖಾಸಗಿ ಬಸ್ ಹಾಗೂ ಗದಗನಿಂದ ರಾಯಚೂರಿಗೆ ಬರುತ್ತಿದ್ದ ಇನ್ನೋವಾ ಕಾರು ಮಧ್ಯೆ ಅಪಘಾತ ಸಂಭವಿಸಿದೆ.

ಗಾಯಗೊಂಡವರನ್ನು ಸ್ಥಳೀಯ ರಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.