ರಾಯಚೂರು: ತಾಲ್ಲೂಕಿನ ಕಲ್ಮಲಾ ಹತ್ತಿರ ತುಂಗಭದ್ರಾ ಎಡದಂಡೆ ಕಾಲುವೆ (ಟಿಎಲ್ ಬಿಸಿ) ಅಂಚಿನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ವಿದ್ಯಾರ್ಥಿಗಳಿಬ್ಬರು ಜಾರಿಬಿದ್ದು ಮೃತಪಟ್ಟಿದ್ದಾರೆ. ಇವರೊಂದಿಗಿದ್ದ ಇನ್ನಿಬ್ಬರು ಈಜಿ ಪ್ರಾಣ ಉಳಿಸಿಕೊಂಡಿದ್ದಾರೆ.
ರಾಯಚೂರು ನಗರದ ಸುಜಿತ್ (18) ಹಾಗೂ ವೈಭವ (18) ಮೃತ ವಿದ್ಯಾರ್ಥಿಗಳು. ನಾಗೇಂದ್ರ ಹಾಗೂ ತರುಣ ಇಬ್ಬರು ವಿದ್ಯಾರ್ಥಿಗಳು ಈಜಿ ಹೊರಬಂದಿದ್ದು, ಸುರಕ್ಷಿತವಾಗಿದ್ದಾರೆ. ಎಲ್ಲರೂ ರಾಯಚೂರಿನ ವಿದ್ಯಾನಿಧಿ ಕಾಲೇಜಿನ ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಾಗಿದ್ದಾರೆ.
ಪಿಕ್ ನಿಕ್ ಮಾಡಲು ರಾಯಚೂರಿನಿಂದ ಹೋಗಿದ್ದ ವಿದ್ಯಾರ್ಥಿಗಳು ಒಟ್ಟಾಗಿ ಸೆಲ್ಫಿ ತೆಗೆದುಕೊಳ್ಳುವಾಗ ಈ ಘಟನೆ ನಡೆದಿದೆ.
ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವಿದ್ಯಾರ್ಥಿಗಳಿಬ್ಬರ ಮೃತದೇಹ ಹೊರತೆಗೆದಿದ್ದಾರೆ.
ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.