ADVERTISEMENT

ಅನಧಿಕೃತ ಅಂಗಡಿಗಳ ತೆರವಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2021, 11:09 IST
Last Updated 4 ಸೆಪ್ಟೆಂಬರ್ 2021, 11:09 IST
ಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಭಾರತೀಯ ಮಜ್ದೂರ್ ಸಂಘದ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು
ಹಟ್ಟಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಭಾರತೀಯ ಮಜ್ದೂರ್ ಸಂಘದ ಪದಾಧಿಕಾರಿಗಳು ಮನವಿ ಪತ್ರ ಸಲ್ಲಿಸಿದರು   

ಹಟ್ಟಿ ಚಿನ್ನದಗಣಿ: ಹಟ್ಟಿ ಪಟ್ಟಣದ ಹಳೆ ಬಸ್ ನಿಲ್ದಾಣದಲ್ಲಿನ ಅನಧಿಕೃತ ಡಬ್ಬ ಅಂಗಡಿಗಳನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದ ಪದಾಧಿಕಾರಿಗಳು ಪಂ‌ಚಾಯಿತಿ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ಹಿಂದೆ ರಸ್ತೆ ಪಕ್ಕದಲ್ಲಿ ಟ್ಯಾಕ್ಸಿಗಳು ನಿಲ್ಲಿಸಲು ಪಟ್ಟಣ ಪಂಚಾಯಿತಿ ವತಿಯಿಂದ ಸ್ಥಳಾವಕಾಶ ಕಲ್ಪಿಸಿಕೊಡಲಾಗಿತ್ತು. ಆದರೆ, ಡಬ್ಬ ಅಂಗಡಿ ಮಾಲೀಕರು ರಸ್ತೆಯನ್ನು ಆಕ್ರಮಿಸಿಕೊಂಡಿರುವುದರಿಂದ ಟ್ಯಾಕ್ಸಿಗಳನ್ನು ನಿಲ್ಲಿಸಲು ತೊಂದರೆಯಾಗಿದೆ.

ಕೂಡಲೇ ರಸ್ತೆ ಒತ್ತುವರಿ ಮಾಡಿಕೊಂಡ ಅಂಗಡಿಗಳನ್ನು ತೆರವು ಮಾಡಬೇಕು. ನಿರ್ಲಕ್ಷಿಸಿದರೆ ಪಟ್ಟಣ ಪಂಚಾಯಿತಿ ಮುಂದೆ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ADVERTISEMENT

ಈ ವೇಳೆ ಭಾರತೀಯ ಮಜ್ದೂರ್ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜುಗೌಡ ಗುರಿಕಾರ, ಖಾದರ್ಪಾಶ, ಮೌನೇಶ, ಯಲ್ಲಪ್ಪ, ದವಲಸಾಭ್, ಮೌಲಸಾಬ್, ಬಾಬುನಾಯಿಕೊಡಿ, ಬಾಬುಬಾಯಿ (ಕೋಮಲ್) ಸೇರಿದಂತೆ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.