ರಾಯಚೂರು:ಕೊರೊನಾ ವೈರಸ್ ಸೋಂಕನ್ನು ತಡೆಗಟ್ಟಲು ಈಗಾಗಲೇ ಸರ್ಕಾರ ಹೊರಡಿಸಿದ ಆದೇಶವನ್ನು ಉಲ್ಲಂಘನೆ ಮಾಡಿ, ಜಿಲ್ಲೆಯ ವಿವಿಧೆಡೆ ವಿನಾಕಾರಣ ರಸ್ತೆಯ ಮೇಲೆ ಸಂಚರಿಸುತ್ತಿದ್ದ 141 ಜನರ ಮೇಲೆ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ ಕಾರ್ಯಾಚರಣೆ ಕೈಗೊಂಡು ಒಟ್ಟಾರೆ 247 ಬೈಕ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ರಾಯಚೂರಿನಲ್ಲಿ ವಾಹನ ಸವಾರರನ್ನು ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಎಲ್ಲರನ್ನೂ ಒಂದೆಡೆ ಸೇರಿಸಿ ರಾತ್ರಿವರೆಗೂ ಇಟ್ಟುಕೊಂಡು ನಂತರ ಲಘು ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಆದ್ದರಿಂದ ಯಾರೂ ಇಂತಹ ಸಮಸ್ಯೆಗಳಿಗೆ ಎಡೆಮಾಡಿಕೊಡದೆ ಅತಿ ಅವಶ್ಯಕತೆ ಇದ್ದಾಗ ಮಾತ್ರ ಮನೆಯಿಂದ ಹೊರಗಡೆ ಬರಬೇಕು ಎಂದು ಸೂಚಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.