ADVERTISEMENT

ಅತ್ಯಾಚಾರ ಆರೋಪಿಗಳ ಬಂಧನಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2018, 12:35 IST
Last Updated 9 ಅಕ್ಟೋಬರ್ 2018, 12:35 IST
ರಾಯಚೂರಿನಲ್ಲಿ ಕರ್ನಾಟಕ ಅಂಗವಿಕಲ ರಾಜ್ಯ ಒಕ್ಕೂಟ ಹಾಗೂ ಹೈದರಾಬಾದ್ ಕರ್ನಾಟಕ ವಿಕಲಚೇತನರ ಹೋರಾಟಿ ಸಮಿತಿ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿ ಬುದ್ದಿಮಾಂಧ್ಯ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿದರು
ರಾಯಚೂರಿನಲ್ಲಿ ಕರ್ನಾಟಕ ಅಂಗವಿಕಲ ರಾಜ್ಯ ಒಕ್ಕೂಟ ಹಾಗೂ ಹೈದರಾಬಾದ್ ಕರ್ನಾಟಕ ವಿಕಲಚೇತನರ ಹೋರಾಟಿ ಸಮಿತಿ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿ ಬುದ್ದಿಮಾಂಧ್ಯ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಆರೋಪಿಗಳನ್ನು ಬಂಧಿಸಲು ಒತ್ತಾಯಿಸಿದರು   

ರಾಯಚೂರು: ವಿಜಯಪುರ ಜಿಲ್ಲೆಯ ಬಾಗೇವಾಡಿ ಗ್ರಾಮದಲ್ಲಿ ಬುದ್ದಿಮಾಂಧ್ಯ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಆರೋಪಿಗಳನ್ನು ಬಂಧಿಸಿ, ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಅಂಗವಿಕಲ ರಾಜ್ಯ ಒಕ್ಕೂಟ ಹಾಗೂ ಹೈದರಾಬಾದ್ ಕರ್ನಾಟಕ ವಿಕಲಚೇತನರ ಹೋರಾಟಿ ಸಮಿತಿ ಸದಸ್ಯರು ಜಂಟಿಯಾಗಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಸೆಪ್ಟೆಂಬರ್ 30ರಂದು ಕಾಣೆಯಾಗಿದ್ದ ಬುದ್ದಿಮಾಂಧ್ಯ ಬಾಲಕಿ ಅಕ್ಟೋಬರ್ 1ರಂದು ಗ್ರಾಮದ ಸೀಮಾಂತರದ ಜಮೀನಿನಲ್ಲಿ ಶವವಾಗಿ ಪತ್ತೆಯಾಗಿದ್ದಳು. ಬುದ್ದಿಮಾಂಧ್ಯ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಖಂಡನೀಯವಾಗಿದೆ ಎಂದರು.

ADVERTISEMENT

ಘಟನೆ ನಡೆದು ವಾರ ಕಳೆದರೂ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ನಿಷ್ಪಕ್ಷಪಾತ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿ ಕ್ರಮ ಜರುಗಿಸಬೇಕು. ಬಾಲಕಿಯ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಪದಾಧಿಕಾರಿಗಳಾದ ಮೊಹ್ಮದ ಅಹ್ಮದ್, ಮಹ್ಮದ ಅಲಿ, ಬಡೇಸಾಬ್, ಗೌಸ್‌ಖಾನ್, ಹನುಮಂತ, ಮಹೇಂದ್ರ, ಭೀಮಸೇನಾ, ಮುರಳಿ, ವೀರೇಶ, ಆಂಜನೇಯ, ಸಿದ್ಧಪ್ಪ, ಗೋವಿಂದ, ರಾಜಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.