ADVERTISEMENT

ರಾಯಚೂರು: ಕಾರ್ಮಿಕ ವಿರೋಧಿ ನೀತಿ ಕೈಬಿಡಿ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2020, 11:40 IST
Last Updated 7 ಆಗಸ್ಟ್ 2020, 11:40 IST
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ವಿದ್ಯುತ್ ಕಾರ್ಮಿಕರ ಫೆಡರೇಶನ್ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು
ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ವಿದ್ಯುತ್ ಕಾರ್ಮಿಕರ ಫೆಡರೇಶನ್ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು   

ರಾಯಚೂರು: ಕೆಪಿಟಿಸಿಎಲ್‌ನಿಂದ ಜೂನ್‌ 9 ರಂದು ಹೊರಡಿಸಿರುವ ಗುತ್ತಿಗೆ ನಿಯಮಾವಳಿಗಳಲ್ಲಿ ಕಾರ್ಮಿಕ ವಿರೋಧಿ ಅಂಶಗಳನ್ನು ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ವಿದ್ಯುತ್ ಕಾರ್ಮಿಕರ ಫೆಡರೇಶನ್, ಅಖಿಲ ಭಾರತ ವಿದ್ಯುತ್ ನೌಕರರ ಒಕ್ಕೂಟ( ಸಿಐಟಿಯು ಸಂಯೋಜಿತ) ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ರಾಜ್ಯದ 20 ಸಾವಿರ ಗುತ್ತಿಗೆ ಕಾರ್ಮಿಕರು ವಿವಿಧ ಸ್ತರದ ಸ್ಟೇಶನ್ ಅಪರೇಟರ್, ಸಹಾಯಕರು ಸಿಬ್ಬಂದಿ ದುಡಿಯುತ್ತಿದ್ದಾರೆ. ಅವರನ್ನು ಕೆಲಸಕ್ಕೆ ತೆಗೆದುಕೊಳ್ಳವಾಗ ಶೈಕ್ಷಣಿಕ ಅರ್ಹತೆ ಕಡ್ಡಾಯಗೊಳಿಸದೆ ದುಡಿಸಿಕೊಳ್ಳಲಾಗಿದೆ. ಆದರೆ ಈಗ ನಿರ್ಬಂಧ ಸಡಿಲಿಕೆಯ ನಂತರ ಕಾರ್ಮಿಕರನ್ನು ತೆಗೆಯಲು ನಿರಂತರ ಪ್ರಯತ್ನ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರು ನೇರವಾಗಿ ಯಾರನ್ನು ಕೆಲಸದಿಂದ ತೆಗೆಯಬಾರದು ಎಂದು ಹೇಳಿದ್ದರು. ಇಂದಿನ ಇಲಾಖೆಯ ಪ್ರಕರಣ ಒಂದರಲ್ಲಿ ನ್ಯಾಯಾಲಯದಲ್ಲಿ ವಿವಾದ ಬಾಕಿ ಇರುವುದರಿಂದ ಯಾವುದೇ ಕಾರ್ಮಿಕರ ಸೇವಾ ಷರತ್ತು ಬದಲಾಯಿಸುವುದು ಕಾನೂನು ಬಾಹೀರ. ಕಾರ್ಮಿಕ ವಿರೋಧಿ ನೀತಿ ಅನುಸರಿಸಲಾಗುತ್ತಿದೆ ಎಂದು ದೂರಿದರು.

ADVERTISEMENT

ಸಂಘದ ಜಿಲ್ಲಾಧ್ಯಕ್ಷ ಅಮರೇಶ ಮಾವಿನಬಾವಿ, ಡಿ.ಎಸ್. ಶರಣಬಸವ, ಮಂಜುನಾಥ ಅರಕೇರಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.