ADVERTISEMENT

ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 27 ಡಿಸೆಂಬರ್ 2019, 13:38 IST
Last Updated 27 ಡಿಸೆಂಬರ್ 2019, 13:38 IST
ನೆಹರು ಯುವ ಕೇಂದ್ರದಲ್ಲಿ ಮಾಜಿ ಪ್ರಧಾನಿ  ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ಅತ್ತ್ಯುತಮ ಆಡಳಿತ ದಿನವನ್ನು ಈಚೆಗೆ ಆಚರಿಸಲಾಯಿತು
ನೆಹರು ಯುವ ಕೇಂದ್ರದಲ್ಲಿ ಮಾಜಿ ಪ್ರಧಾನಿ  ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ದಿನಾಚರಣೆ ಅಂಗವಾಗಿ ಅತ್ತ್ಯುತಮ ಆಡಳಿತ ದಿನವನ್ನು ಈಚೆಗೆ ಆಚರಿಸಲಾಯಿತು   

ರಾಯಚೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ದೇಶಪ್ರೇಮ, ಸೇವಾಮನೋಭಾವನೆ, ನಿಸ್ವಾರ್ಥ ಸೇವೆಯನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಡಾ.ಬಿ.ಆರ್. ಅಂಬೇಡ್ಕರ್‌ ಯುವ ಅಭಿವೃದ್ದಿ ಸಂಘದ ಕಾರ್ಯದರ್ಶಿ ತಿರುಮಲೇಶ ಹೇಳಿದರು.

ನಗರದ ಜಿಲ್ಲಾ ನೆಹರು ಯುವ ಕೇಂದ್ರದಲ್ಲಿ ಭಾರತ ಸೇವಾದಳ ಜಿಲ್ಲಾ ಶಾಖೆ, ಚಾಮುಂಡೇಶ್ವರಿ ಮಹಿಳಾ ಎಸ್.ಎಚ್.ಜಿ,. ವಿ.ಜಿ.ಸಿ. ಟ್ರಸ್ಟ್,. ಡಾ.ಬಿ.ಆರ್. ಅಂಬೇಡ್ಕರ್‌ ಯುವ ಅಭಿವೃದ್ದಿ ಸಂಘ ಹಾಗೂ ತೃಪ್ತಿ ಮಹಿಳಾ ಮಂಡಳಿ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಅತ್ಯುತ್ತಮ ಆಡಳಿತ ದಿನವನ್ನಾಗಿ ಆಚರಿಸಲಾಯಿತು.

ತೃಪ್ತಿ ಮಹಿಳಾ ಮಂಡಳಿ ಉಪಾಧ್ಯಕ್ಷೆ ಅಯಾನ್ ಅಲಿ ಮಾತನಾಡಿ, ಸರ್ಕಾರದ ಕೌಶಲ ಯೋಜನೆಗಳು ಮತ್ತು ವ್ಯಕ್ತಿತ್ವ ವಿಕಸನದ ಬಗ್ಗೆ ಸವಿಸ್ತಾರವಾಗಿ ತಿಳಿಸಿದರು.

ADVERTISEMENT

ನಾಗರಾಜ, ತಿಮ್ಮಾರೆಡ್ಡಿ, ರೋಹಿತ್, ಈರಣ್ಣ, ವೀರೇಶ, ವೆಂಕಟೇಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.