ADVERTISEMENT

ವೇಮನ ಜಯಂತಿ ಸರಳ ಆಚರಣೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2022, 15:10 IST
Last Updated 19 ಜನವರಿ 2022, 15:10 IST
ರಾಯಚೂರಿನ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಮಹಾಯೋಗಿ ವೇಮನ ಜಯಂತಿ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಅವಿನಾಶ್‌ ಮೆನನ್‌ ಅವರು ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದರು
ರಾಯಚೂರಿನ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಮಹಾಯೋಗಿ ವೇಮನ ಜಯಂತಿ ಸರಳ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಅವಿನಾಶ್‌ ಮೆನನ್‌ ಅವರು ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದರು   

ರಾಯಚೂರು: ನಗರದ ಪಂಡಿತ್‌ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಹಾಯೋಗಿ ವೇಮನ ಜಯಂತಿಯನ್ನು ಬುಧವಾರ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿದ್ದ ಸಾಂಕೇತಿಕ ಸಮಾರಂಭದಲ್ಲಿ ಅಧಿಕಾರಿಗಳು ಮತ್ತು ಸಮಾಜದ ಪ್ರಮುಖ ಭಾಗವಹಿಸಿದ್ದರು.

ಜಿಲ್ಲಾಧಿಕಾರಿ ಡಾ.ಅವಿನಾಶ್‌ ಮೆನನ್‌ ಅವರು ಮಹಾಯೋಗಿ ವೇಮನ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ADVERTISEMENT

‌ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಮಂಗಳಾ ನಾಯಕ್‌, ತಹಶೀಲ್ದಾರ್‌ ಡಾ.ಹಂಪಣ್ಣ ಸಜ್ಜನ್‌, ರೆಡ್ಡಿ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ರಾಮಚಂದ್ರ ರೆಡ್ಡಿ, ಮುಖಂಡರಾದ ಸುಧಾಕರರೆಡ್ಡಿ, ಅಚ್ಯುತರೆಡ್ಡಿ, ಭೀಮರೆಡ್ಡಿ, ವಿಷ್ಣುವರ್ಧನರೆಡ್ಡಿ, ಲಕ್ಷೀಕಾಂತರೆಡ್ಡಿ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.