ADVERTISEMENT

ಕಾಂಗ್ರೆಸ್‌ಗೆ ಗೆಲುವು: ವಿಜಯೋತ್ಸವ

​ಪ್ರಜಾವಾಣಿ ವಾರ್ತೆ
Published 2 ಮೇ 2021, 14:01 IST
Last Updated 2 ಮೇ 2021, 14:01 IST
ಸಿರವಾರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು
ಸಿರವಾರದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು   

ಸಿರವಾರ: ಮಸ್ಕಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ ಗೆಲುವು ಸಾಧಿಸಿದ ಕಾರಣ ಪಟ್ಟಣದಲ್ಲಿ ಯುವ ಕಾಂಗ್ರೆಸ್‌ನಿಂದ ಭಾನುವಾರ ವಿಜಯೋತ್ಸವ ಆಚರಿಸಲಾಯಿತು.

ಪಟ್ಟಣದ ತೇಜಸ್ ಮಹಲ್ ಆವರಣದಲ್ಲಿ ಸೇರಿದ ಯುವ ಘಟಕದ ಕಾರ್ಯಕರ್ತರು ಸಿಹಿಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಯೂತ್ ಕಾಂಗ್ರೆಸ್‌ನ ಬ್ಲಾಕ್ ಅಧ್ಯಕ್ಷ ಅಮರೇಶ ನಾಯಕ, ವೆಂಕಟೇಶ ದೊರೆ, ಅಪ್ಸರ್, ರಫಿ, ಭೀಮೇಶ, ಗುರುರಾಜ, ಹನುಮೇಶ, ವಂದಲಯ್ಯ ಹಾಗೂ ವೆಂಕಟೇಶ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.