ADVERTISEMENT

ರಾಯಚೂರು: ಶಿಸ್ತು ಉಲ್ಲಂಘನೆ; ಮೂವರು ಸಾರಿಗೆ ನೌಕರರ ವಜಾ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2021, 14:45 IST
Last Updated 10 ಏಪ್ರಿಲ್ 2021, 14:45 IST

ರಾಯಚೂರು: ಸಾರಿಗೆ ನೌಕರರ ಮುಷ್ಕರ ಮುಂದುವರಿದಿದ್ದು, ಶಿಸ್ತು ಉಲ್ಲಂಘನೆ ಆಧರಿಸಿ ಮೂವರು ನೌಕರರನ್ನು ವಜಾಗೊಳಿಸಲಾಗಿದೆ.

‘ನೌಕರರ ವಿವರ ಹಾಗೂ ಡಿಪೋ ಕೂಡಾ ಹೇಳುವುದಕ್ಕೆ ಆಗುವುದಿಲ್ಲ’ ಎಂದು ಎನ್‌ಇಕೆಆರ್‌ಟಿಸಿ ರಾಯಚೂರು ವಿಭಾಗದ ನಿಯಂತ್ರಕ ಎಂ.ವೆಂಕಟೇಶ ತಿಳಿಸಿದರು.

‘ಜಿಲ್ಲೆಯಾದ್ಯಂತ 35 ಸಾರಿಗೆ ಬಸ್‌ಗಳ ಸಂಚಾರ ಆರಂಭಿಸಲಾಗಿದೆ. ತೆಲಂಗಾಣ ಮತ್ತು ಆಂಧ್ರಪ್ರದೇಶ ಸಾರಿಗೆ ಸಂಸ್ಥೆಯ ಅಧಿಕಾರಿಗಳೊಂದಿಗೆ ಮಾತನಾಡಿ ಅಲ್ಲಿಂದ ರಾಯಚೂರಿಗೆ ಹೆಚ್ಚುವರಿ ಬಸ್‌ಗಳನ್ನು ಬಿಡಿಸಲಾಗಿದೆ. ಸುಮಾರು 50 ಹೆಚ್ಚಿನ ಬಸ್‌ಗಳು ಸಂಚರಿಸುತ್ತಿವೆ. ಯುಗಾದಿ ಹಿನ್ನೆಲೆಯಲ್ಲಿ ಶ್ರೀಶೈಲಕ್ಕೆ ಹೋಗುವ ಭಕ್ತರಿಗೆ ಅನುಕೂಲವಾಗುವಂತೆ ಸಂಸ್ಥೆಯಿಂದ 20 ಹೆಚ್ಚುವರಿ ಬಸ್‌ಗಳನ್ನು ಬಿಡಲಾಗಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.