
ಪ್ರಜಾವಾಣಿ ವಾರ್ತೆ
ಲಿಂಗಸುಗೂರು ಪಟ್ಟಣದಲ್ಲಿ ಬಾಲ್ಯವಿವಾಹ ಮುಕ್ತ ಕರ್ನಾಟಕ ಜಾಗೃತಿ ರಥಯಾತ್ರೆಯನ್ನು ಸ್ವಾಗತಿಸಲಾಯಿತು
ಲಿಂಗಸುಗೂರು: ಬಾಲ್ಯ ವಿವಾಹ ಮುಕ್ತ ಕರ್ನಾಟಕ ಜಾಗೃತಿ ರಥಯಾತ್ರೆಯನ್ನು ಪಟ್ಟಣದಲ್ಲಿ ಮಂಗಳವಾರ ತಾಲ್ಲೂಕು ಆಡಳಿತ ಸ್ವಾಗತಿಸಿತು.
ಜಿಲ್ಲೆಯಾದ್ಯಂತ ಬಾಲ್ಯವಿವಾಹದ ಕುರಿತು ಜಾಗೃತಿ ಮೂಡಿಸಲು ಕೈಗೊಂಡಿರುವ ಬಾಲ್ಯ ವಿವಾಹ ಮುಕ್ತ ರಥಯಾತ್ರೆಯನ್ನು ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿ ಬಳಿ ಬರಮಾಡಿಕೊಳ್ಳಲಾಯಿತು.
ಸಿಡಿಪಿಒ ನಾಗರತ್ನ, ಕ್ಷೇತ್ರ ಶಿಕ್ಷಣಾಧಿಕಾರಿ ಸುಜಾತ ಹೂನೂರು, ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ ಜೋಶಿ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಅನೇಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.