ADVERTISEMENT

ಮಗು ಜೊತೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ತಾಯಿ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 7:58 IST
Last Updated 23 ಫೆಬ್ರುವರಿ 2021, 7:58 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ರಾಯಚೂರು: ಜಿಲ್ಲೆಯ ಮಾನ್ವಿ ತಾಲ್ಲೂಕಿನ ಅರೋಲಿ ಗ್ರಾಮದಲ್ಲಿ ಪತಿಯ ಮನೆಯಿಂದ ಮಗು ಜೊತೆ ಕಾಣೆಯಾಗಿದ್ದ ತಾಯಿ, ಅದೇ ಗ್ರಾಮದಲ್ಲಿನ ಬಾವಿಗೆ ಹಾರಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮೂರು ದಿನ ಕಳೆದು ಬೆಳಕಿಗೆ ಬಂದಿದೆ.

ಹನುಮಂತಿ ಹುಲಗಯ್ಯ (26) ಹಾಗೂ ಉದಯ (14 ತಿಂಗಳು) ಪ್ರಾಣ ಕಳೆದುಕೊಂಡಿದ್ದಾರೆ. ರಾಯಚೂರು ತಾಲ್ಲೂಕಿನ ಮಟಮಾರಿ ಗ್ರಾಮದ ಹನುಮಂತಿ ಮತ್ತು ಹುಲಗಯ್ಯ ಅವರದ್ದು ಏಳು ವರ್ಷಗಳ ಹಿಂದೆ ಮದುವೆಯಾಗಿತ್ತು. ಪತಿ ಮತ್ತು ಪತಿಯ ಸಂಬಂಧಿಗಳು ಈಚೆಗೆ ಕಿರುಕುಳ ನೀಡಿದ್ದು, ಆತ್ಮಹತ್ಯೆಗೆ ಕಾರಣ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಶುಕ್ರವಾರ ಮಗು ಜೊತೆ ಹನುಮಂತಿ ಅವರು ಮನೆಯಿಂದ ಹೊರಹೋಗಿದ್ದರು. ಕಾಣೆಯಾದ ಬಗ್ಗೆ ಸೋಮವಾರ ಮಾನ್ವಿ ಠಾಣೆಯಲ್ಲಿ ಪ್ರಕರಣ ಕೂಡಾ ದಾಖಲಿಸಲಾಗಿತ್ತು. ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.