ADVERTISEMENT

ಲಿಂಗಸುಗೂರು: ‘ಪೂರ್ಣಿಮಾಗೆ ಸಚಿವ ಸ್ಥಾನ ನೀಡಿ’

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2021, 4:42 IST
Last Updated 9 ಆಗಸ್ಟ್ 2021, 4:42 IST
ಲಿಂಗಸುಗೂರಿನಲ್ಲಿ ಶನಿವಾರ ಯಾದವ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು
ಲಿಂಗಸುಗೂರಿನಲ್ಲಿ ಶನಿವಾರ ಯಾದವ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಮನವಿ ಸಲ್ಲಿಸಿದರು   

ಲಿಂಗಸುಗೂರು: ‘ಚಿತ್ರದುರ್ಗ ಜಿಲ್ಲೆ ಹಿರಿಯೂರು ಶಾಸಕಿ ಪೂರ್ಣಿಮಾ ಶ್ರೀನಿವಾಸ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಆಗ್ರಹಿಸಿ ಯಾದವ ಕ್ಷೇಮಾಭಿವೃದ್ಧಿ ಸಂಘದ ಕಾರ್ಯಕರ್ತರು ಮನವಿ ಸಲ್ಲಿಸಿದರು.

ಮುಖ್ಯಮಂತ್ರಿಗೆ ಬರೆದ ಮನವಿಯನ್ನು ಉಪ ವಿಭಾಗಾಧಿಕಾರಿ ಕಚೇರಿ ಅಧಿಕಾರಿ ಶಾಲಂಸಾಬ ಅವರಿಗೆ ಸಲ್ಲಿಸಲಾಯಿತು.

ರಾಜ್ಯದಾದ್ಯಂತ ಯಾದವ ಸಮಾಜದವರು ಬಿಜೆಪಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಪೂರ್ಣಿಮಾ ಅವರ ಗೆಲುವಿನಿಂದ ಬಿಜೆಪಿ ಪಕ್ಷಕ್ಕೆ ಬಲ ಬಂದಿದೆ ಎಂದು ಹೇಳಿದರು.

ADVERTISEMENT

ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಯಾದವ ಸಮುದಾಯ ಹಿಂದುಳಿದಿದೆ. ಪ್ರಾತಿನಿಧ್ಯ ನೀಡಬೇಕು ಎಂದರು. ತಾಲ್ಲೂಕು ಘಟಕದ ಅಧ್ಯಕ್ಷ ಪರಮೇಶ ಯಾದವ, ಮುಖಂಡರಾದ ಭೀಮಣ್ಣ ಟೇಲರ್, ನಾಗರಾಜ, ರಮೇಶ ಯಾದವ, ಕರಿಯಪ್ಪ, ಭೀಮಣ್ಣ ಹುಲಗಿ ಹಾಗೂ ಗಂಗಪ್ಪ ಮುದಗಲ್‍ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.