ADVERTISEMENT

ಸಂಕ್ರಾಂತಿ ಪುಣ್ಯಸ್ನಾನಕ್ಕಾಗಿ ತುಂಗಭದ್ರಾ ನದಿಗೆ ಇಳಿದಿದ್ದ ಯುವಕ ನೀರುಪಾಲು

​ಪ್ರಜಾವಾಣಿ ವಾರ್ತೆ
Published 15 ಜನವರಿ 2026, 10:51 IST
Last Updated 15 ಜನವರಿ 2026, 10:51 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಮಾನ್ವಿ (ರಾಯಚೂರು ಜಿಲ್ಲೆ): ತಾಲ್ಲೂಕಿನ ಚೀಕಲಪರ್ವಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಪುಣ್ಯಸ್ನಾನಕ್ಕಾಗಿ ತುಂಗಭದ್ರಾ ನದಿಗೆ ಇಳಿದಿದ್ದ ಯುವಕ ನೀರುಪಾಲಾಗಿದ್ದಾನೆ.

ಮೃತ ಯುವಕನನ್ನು ಮಾನ್ವಿ ಪಟ್ಟಣದ ವಂಶಿ ರೆಡ್ಡಿ ಸುರೇಂದ್ರ ರೆಡ್ಡಿ ರಾಜಲದಿನ್ನಿ (18) ಎಂದು ಗುರುತಿಸಲಾಗಿದೆ. ಯುವಕ ವಂಶಿ ರೆಡ್ಡಿ ಸ್ನಾನಕ್ಕಾಗಿ ನೀರಿಗೆ ಇಳಿದಾಗ ಮುಳುಗಿ ಮೃತಪಟ್ಟಿದ್ದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ADVERTISEMENT

ವಿಷಯ ತಿಳಿಯುತ್ತಲೇ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಯುವಕನ ಶವದ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.