ADVERTISEMENT

ಅಪಾಯಕಾರಿ ನೀರಿನ ಟ್ಯಾಂಕ್‌

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2017, 9:35 IST
Last Updated 13 ಅಕ್ಟೋಬರ್ 2017, 9:35 IST

ಮಾಗಡಿ: ತಾಲ್ಲೂಕಿನ ಮಾನಗಲ್‌ ಗ್ರಾಮದ ಬಳಿ ಕುಡಿಯುವ ನೀರು ಸರಬರಾಜು ಮಾಡಲು ಕಟ್ಟಿಸಿದ್ದ ಟ್ಯಾಂಕ್‌ ಕಾಮಗಾರಿ ಅರ್ಧಕ್ಕೆ ನಿಂತು 2 ವರ್ಷಗಳಾದರೂ ಪೂರ್ಣಗೊಂಡಿಲ್ಲ.

ಎಂ.ಆರ್‌.ಶ್ರೀನಿವಾಸ್‌ ಈ ಕುರಿತು ದೂರಿದ್ದು, ಟ್ಯಾಂಕ್‌ ಕಟ್ಟಿಸಲು ಬಳಸಿದ್ದ ಕಬ್ಬಿಣದ ಸರಳುಗಳು ತುಕ್ಕು ಹಿಡಿದಿವೆ ಎಂದು ದೂರಿದ್ದಾರೆ.

ಟ್ಯಾಂಕ್‌ ಯಾವುದೇ ಕ್ಷಣದಲ್ಲಿ ಉರುಳಿ ಬೀಳುವ ಅಪಾಯ ಎದುರಾಗಿದೆ, ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅರ್ಧಕ್ಕೆ ನಿಂತಿರುವ ಕಾಮಗಾರಿ ಪೂರ್ಣಗೊಳಿಸ ಬೇಕು ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.